ಕೇಂದ್ರ ಸಚಿವ ಗಿರಿರಾಜ್ ಸಿಂಗ್ 
ದೇಶ

ಜನಸಂಖ್ಯಾ ನಿಯಂತ್ರಣ ಕಾನೂನು ಜನಾಂದೋಲನವಾಗಬೇಕು: ಕೇಂದ್ರ ಸಚಿವ ಗಿರಿರಾಜ್ ಸಿಂಗ್

ಭಾರತದಲ್ಲಿ ಜನಸಂಖ್ಯಾ ನಿಯಂತ್ರಣ ಕುರಿತ ತನ್ನ ನಿಲುವನ್ನು ಪುನರ್ ಉಚ್ಚರಿಸಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಜನಸಂಖ್ಯಾ ನಿಯಂತ್ರಣ ಕಾನೂನನ್ನು ಜನರು ಒಂದು ಆಂದೋಲನವನ್ನಾಗಿ ಮಾಡಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ನವದೆಹಲಿ: ಭಾರತದಲ್ಲಿ ಜನಸಂಖ್ಯಾ ನಿಯಂತ್ರಣ ಕುರಿತ ತನ್ನ ನಿಲುವನ್ನು ಪುನರ್ ಉಚ್ಚರಿಸಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಜನಸಂಖ್ಯಾ ನಿಯಂತ್ರಣ ಕಾನೂನನ್ನು ಒಂದು ಆಂದೋಲನವನ್ನಾಗಿ ಮಾಡಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ಜನಸಂಖ್ಯಾ ಹೆಚ್ಚಳ ದೇಶದ ಅಭಿವೃದ್ಧಿ ಹಾಗೂ ಸೌಹಾರ್ದಯುತ ಸಮಾಜಕ್ಕೆ ಅಡ್ಡಿಯನ್ನುಂಟು ಮಾಡುತ್ತಿದೆ. ಪ್ರತಿಯೊಂದು ಮನೆಯಲ್ಲೂ ಜನಸಂಖ್ಯಾ ನಿಯಂತ್ರಣ ಕಾನೂನು ಪ್ರಚಾರವನ್ನು ಕೈಗೊಳ್ಳಬೇಕು. ಕಾಲ ಮತ್ತು ಸಂಪನ್ಮೂಲಗಳು ಮಿತಿಯಲ್ಲಿದ್ದು, ರಸ್ತೆಯಿಂದ ಪಾರ್ಲಿಮೆಂಟ್ ವರೆಗೂ ಆಂದೋಲನವನ್ನಾಗಿ ರೂಪಿಸಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮೂರು ಮಕ್ಕಳನ್ನು ಪಡೆದವರಿಗೆ ಮತದಾನದ ಹಕ್ಕನ್ನು ನೀಡದಂತೆ ಸರ್ಕಾರ ಕಾನೂನು ಜಾರಿಗೆ ತರಬೇಕೆಂಬ ಯೋಗ ಗುರು ಬಾಬಾ ರಾಮ್ ದೇವ್ ಅವರ ಹೇಳಿಕೆಯನ್ನು ಗಿರಿರಾಜ್ ಸಿಂಗ್ ಈ ಹಿಂದೆ ಬೆಂಬಲಿಸಿದ್ದರು.

ಮುಂದಿನ 50 ವರ್ಷಗಳಲ್ಲಿ ದೇಶದ ಜನಸಂಖ್ಯೆ 150 ಕೋಟಿಗಿಂತ  ಹೆಚ್ಚಾಗಲು ನಾವು ಬಿಡಬಾರದು, ಮೂರು ಮಕ್ಕಳನ್ನು ಪಡೆದವರಿಗೆ ಮತದಾನದ ಹಕ್ಕನ್ನು ಸರ್ಕಾರ ರದ್ದುಪಡಿಸುವುದರಿಂದ ಇದು ಸಾಧ್ಯವಾಗಲಿದೆ. ಇಲ್ಲವಾದರೆ ಚುನಾವಣೆಗೆ ಸ್ಪರ್ಧಿಸಿ ಸರ್ಕಾರದಿಂದ ಬರುವ ಸವಲತ್ತುಗಳನ್ನು ಪಡೆದು ಖುಷಿಪಡುತ್ತಾರೆ ಎಂದು ರಾಮ್ ದೇವ್ ಹೇಳಿಕೆ ನೀಡಿದ್ದರು.

ವಿಶ್ವಸಂಸ್ಥೆ ಪ್ರಕಾರ 2017ಲ್ಲಿ ಭಾರತದಲ್ಲಿ ಜನಸಂಖ್ಯೆ ಅಂದಾಜು 1.3 ಬಿಲಿಯನ್ ಇತ್ತು. 2024ರೊಳಗೆ ಇದು ಚೀನಾವನ್ನು ಹಿಂದಿಕ್ಕುವ ಸಾಧ್ಯತೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT