ಸಂಗ್ರಹ ಚಿತ್ರ 
ದೇಶ

ಮತ್ತೆ ವಕ್ಕರಿಸಿದ 'ನಿಪಾಹ್' ಮಹಾಮಾರಿ, ಕೇರಳದಲ್ಲಿ ವೈರಾಣು ಸೋಂಕಿತ ಮೊದಲ ವ್ಯಕ್ತಿ ಪತ್ತೆ

ದೇವರನಾಡು ಕೇರಳದಲ್ಲಿ ಮಹಾಮಾರಿ ನಿಪಾಹ್ ಮತ್ತೆ ವಕ್ಕರಿಸಿದ್ದು, 23 ವರ್ಷದ ವ್ಯಕ್ತಿ ನಿಪಾಹ್ ವೈರಾಣು ಸೋಂಕಿಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ.

ಕೊಚ್ಚಿ: ದೇವರನಾಡು ಕೇರಳದಲ್ಲಿ ಮಹಾಮಾರಿ ನಿಪಾಹ್ ಮತ್ತೆ ವಕ್ಕರಿಸಿದ್ದು, 23 ವರ್ಷದ ವ್ಯಕ್ತಿ ನಿಪಾಹ್ ವೈರಾಣು ಸೋಂಕಿಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ.
ಕೇರಳದ ಎರ್ನಾಕುಲಂ ಮೂಲದ ವ್ಯಕ್ತಿ ಕಳೆದ ವಾರ ತೀವ್ರ ಜ್ವರದಿಂದ ಬಳಲುತ್ತಿದ್ದ. ಆತನನ್ನು ಕೂಡಲೇ ಆಸ್ಪತ್ರೆ ದಾಖಲು ಮಾಡಲಾಗಿತ್ತು, ಆತನಲ್ಲಿನ ಲಕ್ಷಣಗಳನ್ನು ಗುರುತಿಸಿದ್ದ ವೈದ್ಯರು ನಿಪಾಹ್ ಸೋಂಕು ಇರಬಹುದು ಶಂಕಿಸಿದ್ದರು. ಹೀಗಾಗಿ ಅತನ ರಕ್ತದ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್ಐವಿ)ಗೆ ಕಳುಹಿಸಿದ್ದರು. ಇದೀಗ ಈ ರಕ್ತದ ಮಾದರಿಯ ವರದಿ ಬಂದಿದ್ದು, ವ್ಯಕ್ತಿಗೆ ನಿಪಾಹ್ ವೈರಾಣು ತಗುಲಿರುವುದು ವರದಿಯಿಂದ ಸ್ಪಷ್ಟವಾಗಿದೆ.
ಹೀಗಾಗಿ ಸೊಂಕಿತನನ್ನು ವಿಶೇಷ ಕೊಠಡಿಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT