ಸಂಗ್ರಹ ಚಿತ್ರ 
ದೇಶ

ಬಿಜೆಪಿ ಜೊತೆ ಮುನಿಸಿಕೊಂಡ ನಿತೀಶ್ ಗೆ ಮತ್ತೆ 'ಮಹಾಘಟ್ ಬಂಧನ್' ನಿಂದ ಆಹ್ವಾನ!

ಎನ್ ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿದ್ದ ಬಿಹಾರದ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ 'ಮಹಾಘಟ್ ಬಂಧನ್' ಸೇರುವಂತೆ ಲಾಲು ಪ್ರಸಾದ್ ಯಾದವ್ ಅವರ ನೇತೃತ್ವ ಆರ್ ಜೆಡಿ ಪಕ್ಷ ಅಧಿಕೃತ ಆಹ್ವಾನ ನೀಡಿದೆ.

ಪಾಟ್ನಾ: ಎನ್ ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿದ್ದ ಬಿಹಾರದ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ 'ಮಹಾಘಟ್ ಬಂಧನ್' ಸೇರುವಂತೆ ಲಾಲು ಪ್ರಸಾದ್ ಯಾದವ್ ಅವರ ನೇತೃತ್ವ ಆರ್ ಜೆಡಿ ಪಕ್ಷ ಅಧಿಕೃತ ಆಹ್ವಾನ ನೀಡಿದೆ.
ಲೋಕಸಭಾ ಚುನಾವಣೆ ಬಳಿಕ ನಡೆದ ಸರ್ಕಾರ ರಚನೆ ಮತ್ತು ಸಂಪುಟ ರಚನೆ ವೇಳೆ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ತಮಗೆ ಕೇಂದ್ರದಲ್ಲಿ ಯಾವುದೇ ಸಚಿವ ಸ್ಥಾನ ಬೇಡ ಎಂದು ಹೇಳುವ ಮೂಲಕ ಬಹಿರಂಗವಾಗಿಯೇ ಮುನಿಸು ತೋರ್ಪಡಿಸಿದ್ದರು. ಇದೀಗ ಇದೇ ವಿಚಾರವನ್ನು ತಮ್ಮ ಲಾಭಕ್ಕೆ ಉಪಯೋಗಿಸಿಕೊಳ್ಳಲು ಆರ್ ಜೆಡಿ ಪಕ್ಷ ಮುಂದಾಗಿದ್ದು, ನಿತೀಶ್ ಕುಮಾರ್ ಅವರಿಗೆ ಮಹಾಘಟ್ ಬಂಧನ್ ಸೇರುವಂತೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.
ಆರ್ ಜೆಡಿ ಪಕ್ಷದ ಉಪಾಧ್ಯಕ್ಷ ರಘುವಂಶ್ ಪ್ರಸಾದ್ ಸಿಂಗ್ ಅವರು ಸೋಮವಾರ ನಿತೀಶ್ ಕುಮಾರ್ ಅವರಿಗೆ ಈ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಬಿಜೆಪಿಯಲ್ಲಿ ನಿತೀಶ್ ಕುಮಾರ್ ಅವರಿಗೆ ಅಪಮಾನವಾಗಿದ್ದು, ಎನ್ ಡಿಎ ಮೈತ್ರಿಕೂಟ ಅವರನ್ನು ಮೂಲೆಗುಂಪು ಮಾಡಿದೆ. ಈ ಹಿಂದೆಯೂ ಕೂಡ ಬಿಜೆಪಿ ತನ್ನ ಮಿತ್ರ ಪಕ್ಷಗಳನ್ನು ಕಡೆಗಣಿಸಿದ್ದು, ಇದೇ ಕಾರಣಕ್ಕೆ ಹಲವು ಮೈತ್ರಿ ಪಕ್ಷಗಳು ಬಿಜೆಪಿ ವಿರುದ್ಧ ಅಸಮಾಧಾನಗೊಂಡಿವೆ ಎಂದು 
ಅವರು ಹೇಳಿದ್ದಾರೆ.
ಈ  ಹಿಂದೆ ಲೋಕಸಭಾ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟ ತನ್ನ ಎಲ್ಲ ಮಿತ್ರಪಕ್ಷಗಳಿಗೂ ತಲಾ ಒಂದೊಂದು ಸಚಿವ ಸ್ಥಾನ ನೀಡುವುದಾಗಿ ಘೋಷಣೆ ಮಾಡಿತ್ತು. ಅದರಂತೆ ಜೆಡಿಯುಗೂ ಸರ್ಕಾರದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿತ್ತು. ಆದರೆ ನಿತೀಶ್ ಕುಮಾರ್ ಇದನ್ನು ತಿರಸ್ಕರಿಸಿದ್ದರು. ಆ ಮೂಲಕ ಬಿಜೆಪಿ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT