ಇಫ್ತಾರ್ ನಲ್ಲಿ ಭಾಗಿಯಾಗಿದ್ದ ಎನ್ ಡಿಎ ನಾಯಕರ ವಿರುದ್ಧ ಟೀಕೆ: ಗಿರಿರಾಜ್ ಸಿಂಗ್ ಗೆ ಅಮಿತ್ ಶಾ ಕ್ಲಾಸ್! 
ದೇಶ

ಇಫ್ತಾರ್ ನಲ್ಲಿ ಭಾಗಿಯಾಗಿದ್ದ ಎನ್ ಡಿಎ ನಾಯಕರ ವಿರುದ್ಧ ಟೀಕೆ: ಗಿರಿರಾಜ್ ಸಿಂಗ್ ಗೆ ಅಮಿತ್ ಶಾ ಕ್ಲಾಸ್!

ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದಕ್ಕಾಗಿ ಬಿಹಾರ ಸಿಎಂ ನಿತೀಶ್ ಕುಮಾರ್, ಬಿಜೆಪಿ ನಾಯಕ ಸುಶೀಲ್ ಮೋದಿ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಟೀಕಿಸಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗೆ

ನವದೆಹಲಿ: ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದಕ್ಕಾಗಿ ಬಿಹಾರ ಸಿಎಂ ನಿತೀಶ್ ಕುಮಾರ್, ಬಿಜೆಪಿ ನಾಯಕ ಸುಶೀಲ್ ಮೋದಿ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಟೀಕಿಸಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕ್ಲಾಸ್ ತೆಗೆದುಕೊಂಡಿದ್ದಾರೆ. 
ಗಿರಿರಾಜ್ ಸಿಂಗ್ ಗೆ ಎಚ್ಚರಿಕೆ ನೀಡಿರುವ ಗೃಹ ಸಚಿವ ಶಾ, ಈ ರೀತಿಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಯಾಗಬಾರದು ಎಂಬ ಎಚ್ಚರಿಕೆಯನ್ನೂ ಅಮಿತ್ ಶಾ ನೀಡಿದ್ದಾರೆ. 
ಬಿಹಾರ ಸಿಎಂ ನಿತೀಶ್ ಕುಮಾರ್, ಬಿಜೆಪಿ ನಾಯಕ ಸುಶೀಲ್ ಮೋದಿ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದರ ಬಗ್ಗೆ ಟ್ವೀಟ್ ಮಾಡಿದ್ದ ಗಿರಿರಾಜ್ ಸಿಂಗ್, ಇಷ್ಟೇ ಉತ್ಸಾಹದಿಂದ ನವರಾತ್ರಿ ಭೋಜನವನ್ನು ಆಯೋಜಿಸಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು, ನಾವು ನಮ್ಮ ಆಚರಣೆಗಳನ್ನು ಬಿಟ್ಟು ತೋರಿಕೆ ಮೊರೆ ಹೋಗುತ್ತೆವೆ ಏಕೆ ಎಂದು ಸಿಂಗ್ ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT