ಮಸ್ರತ್ ಅಲಂ 
ದೇಶ

ಕಾಶ್ಮೀರ: ಮೂವರು ಪ್ರತ್ಯೇಕತಾವಾದಿಗಳ ಬಂಧನ, 10 ದಿನ ಎನ್ ಐಎ ವಶಕ್ಕೆ

ಪ್ರತ್ಯೇಕತಾವಾದಿಗಳಾದ ಮಸ್ರತ್ ಅಲಂ , ಅಸಿಯಾ ಅಂಡ್ರಾಬಿ ಮತ್ತು ಶಬೀರ್ ಶಾ ಅವರನ್ನು 10 ದಿನಗಳ ಕಾಲ ಎನ್ ಐಎ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ ಎಂದು ವಕೀಲರೊಬ್ಬರು ಹೇಳಿದ್ದಾರೆ.

ನವದೆಹಲಿ: 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್ ಜೊತೆಗೆ ನಂಟು ಹೊಂದಿ ಉಗ್ರ ಚಟುವಟಿಕೆಗಳಿಗೆ ಹಣಕಾಸು ಪೂರೈಕೆ ಮಾಡುತ್ತಿದ್ದ ಪ್ರತ್ಯೇಕತಾವಾದಿಗಳಾದ ಮಸ್ರತ್ ಅಲಂ , ಅಸಿಯಾ ಅಂಡ್ರಾಬಿ ಮತ್ತು ಶಬೀರ್ ಶಾ ಅವರನ್ನು 10 ದಿನಗಳ ಕಾಲ ಎನ್ ಐಎ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ ಎಂದು ವಕೀಲರೊಬ್ಬರು ಹೇಳಿದ್ದಾರೆ.

ಈ ಮೂವರನ್ನು ಬಂಧಿಸಿದ್ದ ರಾಷ್ಟ್ರೀಯ ವಿಚಾರಣಾ ದಳ ವಿಶೇಷ ನ್ಯಾಯಾಧೀಶ ರಾಕೇಶ್ ಸ್ಯಾಲ್ ಮುಂದೆ ವಿಚಾರಣೆಗಾಗಿ ಹಾಜರುಪಡಿಸಲಾಯಿತು. ವಾದ, ವಿವಾದ ಆಲಿಸಿದ ನ್ಯಾಯಾಧೀಶರು 15 ದಿನಗಳ ಕಾಲ ವಿಚಾರಣೆಗಾಗಿ ಎನ್ ಐಎ ವಶಕ್ಕೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯೇಕ ಪ್ರಕರಣಗಳಲ್ಲಿ ಅಸಿಯಾ ಹಾಗೂ ಶಾ ಈಗಾಗಲೇ ಎನ್ ಐಎ ವಶದಲ್ಲಿದ್ದರು,ಇದೀಗ ಅಲಂನನನ್ನು ಜಮ್ಮು- ಕಾಶ್ಮೀರದಿಂದ ಕರೆತರಲಾಗಿದೆ ಎಂದು ವಕೀಲ ಎಂಎಸ್ ಖಾನ್ ಹೇಳಿದ್ದಾರೆ.

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣಕಾಸು ಪೂರೈಕೆ ಆರೋಪದ ಮೇರೆಗೆ 10 ಪ್ರತ್ಯೇಕತಾವಾದಿಗಳು ಹಾಗೂ ಮಾಸ್ಟರ್ ಮೈಂಡ್ ಸಯ್ಯದ್ ಸಲ್ಲಾವುದ್ದೀನ್, ಸಯೀದ್ ವಿರುದ್ಧ ಎನ್ ಐಎ 2018ರಲ್ಲಿ ಚಾರ್ಜ್ ಶೀಟ್ ದಾಖಲಿಸಿತ್ತು.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 120 ಬಿ ( ಅಪರಾಧ ಪಿತ್ತೂರಿ ) ಹಾಗೂ 1 ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ 1967 ರ ಅಡಿಯಲ್ಲಿ ಚಾರ್ಚ್ ಶೀಟ್ ದಾಖಲಿಸಲಾಗಿತ್ತು.
ಕಳೆದ ವರ್ಷ ಜುಲೈ 24 ರಂದು ಮೊದಲ ಬಾರಿಗೆ  ಆರೋಪಿಗಳನ್ನು ಬಂಧಿಸಲಾಗಿತ್ತು.  ಮೇ 30, 2017ರಲ್ಲಿ ಎನ್ ಐಎ ಕೇಸ್ ದಾಖಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT