ಪಾಕಿಸ್ತಾನ ಮದ್ಯ ಕುಡಿದ ಮಂಗನಂತಾಡುತ್ತಿದೆ: ಶಿವಸೇನೆ 
ದೇಶ

ಪಾಕಿಸ್ತಾನ ಮದ್ಯ ಕುಡಿದ ಮಂಗನಂತಾಡುತ್ತಿದೆ: ಶಿವಸೇನೆ

ಭಾರತೀಯ ಹೈಕಮಿಷನ್ ನ ಆಹ್ವಾನದ ಮೇರೆಗೆ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದವರಿಗೆ ಕಿರುಕುಳ ನೀಡಿರುವ ಪಾಕಿಸ್ತಾನದ ವಿರುದ್ಧ ಶಿವಸೇನೆ ಕೆಂಡಾಮಂಡಲವಾಗಿದೆ.

ಮುಂಬೈ: ಭಾರತೀಯ ಹೈಕಮಿಷನ್ ನ ಆಹ್ವಾನದ ಮೇರೆಗೆ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದವರಿಗೆ ಕಿರುಕುಳ ನೀಡಿರುವ ಪಾಕಿಸ್ತಾನದ ವಿರುದ್ಧ ಶಿವಸೇನೆ ಕೆಂಡಾಮಂಡಲವಾಗಿದೆ. 
ಸಾಮ್ನಾ ಪತ್ರಿಕೆಯಲ್ಲಿ ಪಾಕಿಸ್ತಾನದ ನಡೆಯನ್ನು ಖಂಡಿಸಿರುವ ಉದ್ಧವ್ ಠಾಕ್ರೆ, ಪಾಕಿಸ್ತಾನದ ಸ್ಥಿತಿ ಮದ್ಯ ಕುಡಿದ ಮಂಗನಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಮೋದಿ ಸರ್ಕಾರ ನಡೆಸಿದ ಬಾಲಾಕೋಟ್ ವೈಮಾನಿಕ ದಾಳಿಯಿಂದ ಪಾಕಿಸ್ತಾನ ನಲುಗಿದೆ. ಈಗಲೂ ಪಾಕಿಸ್ತಾನ ಹತಾಶ ಯತ್ನ ಮಾಡುತ್ತಿದೆ ಎಂದು ಉದ್ಧವ್ ಠಾಕ್ರೆ ಪಾಕ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅಭೂತಪೂರ್ವ ಬಹುಮತದೊಂದಿಗೆ ಎರಡನೇ ಅವಧಿಗೆ ಅಧಿಕಾರಕ್ಕೇರಿರುವ ವಾಸ್ತವವನ್ನು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗೆ ಅರಗಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ. 
ಚುನಾವಣಾ ಫಲಿತಾಂಶ ಬಂದ ಬೆನ್ನಲ್ಲೇ ಇಮ್ರಾನ್ ಖಾನ್ ಪ್ರಧಾನಿಗೆ ಶುಭಾಶಯ ತಿಳಿಸಿ, ಶಾಂತಿ ಮಾತುಕತೆ ಬಗ್ಗೆ ಮಾತನಾಡಿದ್ದರು. ಆದರೆ ಪಾಕಿಸ್ತಾನದಲ್ಲಿ ಭಾರತೀಯ ಹೈಕಮಿಷನ್ ನ ಆಹ್ವಾನದ ಮೇರೆಗೆ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದವರಿಗೆ ಕಿರುಕುಳ ನೀಡುವುದನ್ನೂ ಶಾಂತಿ ಸ್ಥಾಪನೆಯ ಭಾಗವೆಂದು ಪರಿಗಣಿಸಬೇಕೆ? ಎಂದು ಠಾಕ್ರೆ ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT