ವಿಖೆ ಪಾಟೀಲ್ 
ದೇಶ

ಶಾಸಕ ಸ್ಥಾನಕ್ಕೆ ಮಹಾ ಹಿರಿಯ ಕಾಂಗ್ರೆಸ್ ನಾಯಕ ವಿಖೆ ಪಾಟೀಲ್ ರಾಜೀನಾಮೆ, ಬಿಜೆಪಿ ಸೇರುವ ಸಾಧ್ಯತೆ

ಮಹಾರಾಷ್ಟ್ರ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭೆ ಮಾಜಿ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಮಂಗಳವಾರ...

ಮುಂಬೈ: ಮಹಾರಾಷ್ಟ್ರ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭೆ ಮಾಜಿ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಮಂಗಳವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ.
ವಿಖೆ ಪಾಟೀಲ್ ಅವರು ಕೆಲ ಕಾಂಗ್ರೆಸ್ ಶಾಸಕರೊಂದಿಗೆ ಬಿಜೆಪಿ ಸೇರಲಿದ್ದಾರೆ ಮತ್ತು ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಇಂದು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಖೆ ಪಾಟೀಲ್ ಅವರ ಪುತ್ರ ಸುಜಯ್ ವಿಖೆ ಪಾಟೀಲ್ ಅವರು ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅಲ್ಲದೆ ಅಹಮ್ಮದನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಜಯ್ ಅವರು ಬರೊಬ್ಬರಿ 2.81 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಪುತ್ರ ಬಿಜೆಪಿ ಸೇರಿದ ನಂತರ ವಿಖೆ ಪಾಟೀಲ್ ಅವರು ಕಳೆದ ಮಾರ್ಚ್ ನಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಮಗನ ಹಾದಿಯಲ್ಲೇ ಸಾಗಿದ ವಿಖೆ ಪಾಟೀಲ್ ಅವರು ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕ ವಿಖೆ ಪಾಟೀಲ್ ಪಾಟೀಲ್ ಅವರು ವಿಧಾಸಭೆ ಸ್ಪೀಕರ್ ಹರಿಭಾವು ಬಾಗಡೆ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕ ಅಬ್ದುಲ್ ಸತ್ತಾರ್ ಅವರು ಸಹ ಬಿಜೆಪಿ ಸೇರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿಗೆ ದಿನಕ್ಕೊಂದು ಶಾಕ್; ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ಮುಂದುವರಿಕೆ..!

UPI MDR: ಗ್ರಾಹಕರಿಗೆ ಮತ್ತೊಂದು ತಲೆ ಬಿಸಿ; ಇನ್ನು ಮುಂದೆ ಪೆಟ್ರೋಲ್ ಪಂಪ್ ಗಳಲ್ಲಿ 2,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿ ಬಂದ್!

ಕನ್ನಡ ವರ್ಣಮಾಲೆ ಬರೆಯಲು ಬಾರದ ವಿದ್ಯಾರ್ಥಿಗಳ ಕಂಡು ಪ್ರದೀಪ್ ಈಶ್ವರ್ ಶಾಕ್: ಶಾಸಕರ ಸೂಚನೆಯಂತೆ 180 ಶಿಕ್ಷಕರಿಗೆ BEO ನೋಟಿಸ್!

ಪರೀಕ್ಷೆಯ ವೇಳೆ ChatGPT ಬಳಕೆ: ಸಿಕ್ಕಿ ಬಿದ್ದ IIT ವಿದ್ಯಾರ್ಥಿ ಆತ್ಮಹತ್ಯೆ