ಪಳನಿಸ್ವಾಮಿ - ನರೇಂದ್ರ ಮೋದಿ 
ದೇಶ

ದೇಶಾದ್ಯಂತ ತಮಿಳು ಐಚ್ಛಿಕ ಭಾಷೆಯಾಗಬೇಕು: ಪ್ರಧಾನಿಗೆ ಪಳನಿಸ್ವಾಮಿ ಒತ್ತಾಯ

ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದಡಿ ಹಿಂದಿ ಕಡ್ಡಾಯಗೊಳಿಸಲು ಹೋಗಿ ವಿವಾದಕ್ಕಿಡಾದ ಬೆನ್ನಲ್ಲೇ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ತಮಿಳು...

ಚೆನ್ನೈ: ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದಡಿ ಹಿಂದಿ ಕಡ್ಡಾಯಗೊಳಿಸಲು ಹೋಗಿ ವಿವಾದಕ್ಕಿಡಾದ ಬೆನ್ನಲ್ಲೇ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ತಮಿಳು ಐಚ್ಛಿಕ ಭಾಷೆಯಾಗಿ ಕಲಿಯಲು ಅವಕಾಶ ಮಾಡಿಕೊಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ  ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪಳನಿಸ್ವಾನಿ, ತಮಿಳುನಾಡನ್ನು ಹೊರತುಪಡಿಸಿ ಇತರೆ ರಾಜ್ಯಗಳ ಪಠ್ಯದ ಆಯ್ಕೆಯಲ್ಲಿ ತಮಿಳು ಭಾಷೆಗೆ ಆದ್ಯತೆ ಕೊಡಬೇಕು ಎಂದು ಹೇಳಿದ್ದಾರೆ.
ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಜೀಯವರೇ ಇತರೆ ರಾಜ್ಯಗಳಲ್ಲೂ ತಮಿಳು ಐಚ್ಛಿಕ ಭಾಷೆಯಾಗಿ ಕಲಿಯಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಮೂಲಕ ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಯ ಕಲಿಕೆಗೆ ಅವಕಾಶ ಮಾಡಿಕೊಟ್ಟರೆ ಇದೊಂದು ದೊಡ್ಡ ಸೇವೆಯಾಗಲಿದೆ ಎಂದು ಪಳನಿಸ್ವಾಮಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT