ಲೋಕಸಭೆ ಚುನಾವಣೆಗೆ ಮುನ್ನ ಒಟ್ಟಿಗೆ ಪ್ರಚಾರದಲ್ಲಿ ನಿರತರಾಗಿದ್ದ ಉತ್ತರ ಪ್ರದೇಶ ರಾಜಕೀಯ ನಾಯಕರು 
ದೇಶ

ಏಕಾಂಗಿಯಾಗಿ ಉತ್ತರ ಪ್ರದೇಶ ಉಪ ಚುನಾವಣೆ ಎದುರಿಸಲು ಈಗ ಆರ್ ಎಲ್ ಡಿ ಸಿದ್ಧ!

ಮುಂಬರುವ 11 ವಿಧಾನಸಭೆ ಉಪ ಚುನಾವಣೆ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಸಮಾಜವಾದಿ ಪಕ್ಷ ...

ಲಕ್ನೊ: ಮುಂಬರುವ 11 ವಿಧಾನಸಭೆ ಉಪ ಚುನಾವಣೆ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳು ತೀರ್ಮಾನಿಸಿದ ನಂತರ ಇತ್ತೀಚೆಗೆ ಲೋಕಸಭಾ ಚುನಾವಣೆಯಲ್ಲಿ ಅವುಗಳ ಮೈತ್ರಿಪಕ್ಷವಾಗಿದ್ದ ಆರ್ ಎಲ್ ಡಿ ಕೂಡ ವಿಧಾನಸಭೆ ಉಪ ಚುನಾವಣೆಯನ್ನು ಏಕಾಂಗಿಯಾಗಿ ಸ್ಪರ್ಧಿಸಲು ನಿಶ್ಚಯಿಸಿದೆ.
ಉತ್ತರ ಪ್ರದೇಶದ ರಾಷ್ಟ್ರೀಯ ಲೋಕದಳ ಅಧ್ಯಕ್ಷ ಮಸೂದ್ ಅಹ್ಮದ್, ಘಟಬಂಧನಕ್ಕೆ ಇದರಿಂದ ಯಾವುದೇ ಅಡ್ಡಿಯುಂಟಾಗುವುದಿಲ್ಲ, ಅದು ಅಖಂಡವಾಗಿರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆಯ 11 ಕ್ಷೇತ್ರಗಳ ಉಪ ಚುನಾವಣೆಯನ್ನು ಆರ್ ಎಲ್ ಡಿ ಏಕಾಂಗಿಯಾಗಿ ಎದುರಿಸಲಿದೆ. ಆದರೆ ರಾಜ್ಯದ ರಾಜಕೀಯ ಸ್ಥಿತಿಗತಿ ಬಗ್ಗೆ ಈಗಲೇ ಹೇಳುವುದು ಮತ್ತು ತೀರ್ಮಾನಕ್ಕೆ ಬರುವುದು ಕಷ್ಟ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.
ಎಷ್ಟು ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ಮುಖ್ಯಸ್ಥ ಚೌಧರಿ ಅಜಿತ್ ಸಿಂಗ್ ಮತ್ತು ಜಯಂತ್ ಚೌಧರಿ ನಿರ್ಧರಿಸಲಿದ್ದು ಮುಂದಿನ ಕೆಲ ದಿನಗಳಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ಅಹ್ಮದ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ ಅಮೆರಿಕ ವ್ಯಾಪಾರ ಒಪ್ಪಂದ: 'ಬಹುತೇಕ ಎಲ್ಲ ಸಮಸ್ಯೆಗಳು ಇತ್ಯರ್ಥವಾಗಿವೆ': ಸರ್ಕಾರಿ ಮೂಲಗಳು!

ರಷ್ಯನ್ ತೈಲ: ಆರ್ಥಿಕ ಅವಶ್ಯಕತೆ ಮತ್ತು ಅಮೆರಿಕದ ಒತ್ತಡಗಳ ನಡುವೆ ಸಿಲುಕಿದ ಭಾರತ, ಚೀನಾ (ಜಾಗತಿಕ ಜಗಲಿ)

ನಾವು ಭಾರತೀಯರನ್ನು ನಂಬುತ್ತೇವೆ; ಟ್ರಂಪ್ ನಮಗೆ...: ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಾ ಕೊರಿನಾ ಮಚಾದೊ ಅಚ್ಚರಿ ಹೇಳಿಕೆ

ಗದರಿಸಿದ್ದಕ್ಕೆ ತಾಯಿಯನ್ನು ಕೊಡಲಿಯಿಂದ ಹೊಡೆದು ಕೊಂದ 16 ವರ್ಷದ ಬಾಲಕ!

Pratap Simha vs Pradeep Eshwar: 'ಲೇ ಮಗನೆ.. ನಮ್ಮಪ್ಪನ್ನಂತೂ ನಿಮ್ಮೂರಿಗೆ ಕಳಿಸಲ್ಲ': ಮಿತಿ ಮೀರಿದ ವಾಕ್ಸಮರ, Video

SCROLL FOR NEXT