ಲೋಕಸಭೆ ಚುನಾವಣೆಗೆ ಮುನ್ನ ಒಟ್ಟಿಗೆ ಪ್ರಚಾರದಲ್ಲಿ ನಿರತರಾಗಿದ್ದ ಉತ್ತರ ಪ್ರದೇಶ ರಾಜಕೀಯ ನಾಯಕರು 
ದೇಶ

ಏಕಾಂಗಿಯಾಗಿ ಉತ್ತರ ಪ್ರದೇಶ ಉಪ ಚುನಾವಣೆ ಎದುರಿಸಲು ಈಗ ಆರ್ ಎಲ್ ಡಿ ಸಿದ್ಧ!

ಮುಂಬರುವ 11 ವಿಧಾನಸಭೆ ಉಪ ಚುನಾವಣೆ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಸಮಾಜವಾದಿ ಪಕ್ಷ ...

ಲಕ್ನೊ: ಮುಂಬರುವ 11 ವಿಧಾನಸಭೆ ಉಪ ಚುನಾವಣೆ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳು ತೀರ್ಮಾನಿಸಿದ ನಂತರ ಇತ್ತೀಚೆಗೆ ಲೋಕಸಭಾ ಚುನಾವಣೆಯಲ್ಲಿ ಅವುಗಳ ಮೈತ್ರಿಪಕ್ಷವಾಗಿದ್ದ ಆರ್ ಎಲ್ ಡಿ ಕೂಡ ವಿಧಾನಸಭೆ ಉಪ ಚುನಾವಣೆಯನ್ನು ಏಕಾಂಗಿಯಾಗಿ ಸ್ಪರ್ಧಿಸಲು ನಿಶ್ಚಯಿಸಿದೆ.
ಉತ್ತರ ಪ್ರದೇಶದ ರಾಷ್ಟ್ರೀಯ ಲೋಕದಳ ಅಧ್ಯಕ್ಷ ಮಸೂದ್ ಅಹ್ಮದ್, ಘಟಬಂಧನಕ್ಕೆ ಇದರಿಂದ ಯಾವುದೇ ಅಡ್ಡಿಯುಂಟಾಗುವುದಿಲ್ಲ, ಅದು ಅಖಂಡವಾಗಿರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆಯ 11 ಕ್ಷೇತ್ರಗಳ ಉಪ ಚುನಾವಣೆಯನ್ನು ಆರ್ ಎಲ್ ಡಿ ಏಕಾಂಗಿಯಾಗಿ ಎದುರಿಸಲಿದೆ. ಆದರೆ ರಾಜ್ಯದ ರಾಜಕೀಯ ಸ್ಥಿತಿಗತಿ ಬಗ್ಗೆ ಈಗಲೇ ಹೇಳುವುದು ಮತ್ತು ತೀರ್ಮಾನಕ್ಕೆ ಬರುವುದು ಕಷ್ಟ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.
ಎಷ್ಟು ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ಮುಖ್ಯಸ್ಥ ಚೌಧರಿ ಅಜಿತ್ ಸಿಂಗ್ ಮತ್ತು ಜಯಂತ್ ಚೌಧರಿ ನಿರ್ಧರಿಸಲಿದ್ದು ಮುಂದಿನ ಕೆಲ ದಿನಗಳಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ಅಹ್ಮದ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವ್ಯಾಪಾರ ಒಪ್ಪಂದ ಮಾತುಕತೆ ಪುನರಾರಂಭವಾಗುತ್ತಿದ್ದಂತೆ ಅಮೆರಿಕದಿಂದ ಮಿಶ್ರ ಪ್ರತಿಕ್ರಿಯೆ

Goa nightclub fire: ಥೈಲ್ಯಾಂಡ್ ನಲ್ಲಿ ನೈಟ್ ಕ್ಲಬ್ ಮಾಲೀಕರಾದ ಸೈರಬ್- ಗೌರವ್ ಲುತ್ರಾ ಸೋದರರ ಬಂಧನ

ಹೈಕೋರ್ಟ್‌ನಲ್ಲಿ ಮುಟ್ಟಿನ ರಜೆ ಸಮರ್ಥಿಸಿಕೊಂಡ ಸರ್ಕಾರ; ವಿಚಾರಣೆ ಜನವರಿ 20 ಕ್ಕೆ ಮುಂದೂಡಿಕೆ

ಕೇಂದ್ರ ಅರಣ್ಯ ಇಲಾಖೆಯಿಂದ ಸಿಗದ ಅನುಮತಿ: ಎತ್ತಿನ ಹೊಳೆ ಯೋಜನೆ ಮತ್ತಷ್ಟು ವಿಳಂಬ

ಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ: ಯಾದವ್ ಹೇಳಿಕೆ ಬಗ್ಗೆ ತನಿಖೆಗೆ ಒತ್ತಾಯಿಸಲು ಒಗ್ಗಟ್ಟಾದ ಪರಿಷತ್ ಸದಸ್ಯರು!

SCROLL FOR NEXT