ಆಂಧ್ರ ಪ್ರದೇಶದಲ್ಲಿ ಬೆಂಗಳೂರು ಟೆಕ್ಕಿ ಭೀಕರ ಕೊಲೆ! 
ದೇಶ

ಆಂಧ್ರ ಪ್ರದೇಶದಲ್ಲಿ ಬೆಂಗಳೂರು ಟೆಕ್ಕಿ ಭೀಕರ ಕೊಲೆ!

ಬೆಂಗಳೂರು ಮೂಲದ ಸಾಫ್ಟ್ ವೇರ್ ಉದ್ಯೋಗಿಯೊಬ್ಬ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ತನ್ನ ತವರೂರಲ್ಲೇ ಭೀಕರವಾಗಿ ಹತ್ಯೆಯಾಗಿದ್ದಾನೆ.

ವಿಜಯವಾಡ: ಬೆಂಗಳೂರು ಮೂಲದ ಸಾಫ್ಟ್ ವೇರ್ ಉದ್ಯೋಗಿಯೊಬ್ಬ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ತನ್ನ ತವರೂರಲ್ಲೇ ಭೀಕರವಾಗಿ ಹತ್ಯೆಯಾಗಿದ್ದಾನೆ. 
ಕಡಪಾ ಜಿಲ್ಲೆ ರೈಲ್ವೆ ಕೊಡೂರ್ ಗ್ರಾಮದ ಅಬ್ದುಲ್ ಖಾದರ್ (26) ಹತ್ಯೆಯಾಗಿರುವ ದುರ್ದೈವಿ. ಈತ ಬೆಂಗಳೂರಿನಿಂದ ಆಗಮಿಸಿದ ಬಸ್ ನಿಂದಿಳಿದು ತನ್ನ ಮನೆಯತ್ತ ತೆರಳುತ್ತಿರುವಾಗ ಕೃಷ್ಣಾ ಚಿತ್ರಮಂದಿರ ಸಮೀಪ ಅವನನ್ನು ಸುತ್ತುಗಟ್ಟಿದ ಗುಂಪು ಚಾಕು ಹಾಗೂ ಮಾರಕಾಸ್ತ್ರಗಳಿಂದ ಅವನ ಮೇಲೆ ಮನಬಂದ್ಂತೆ ಹಲ್ಲೆ ನಡೆಸಿದೆ. ಇದರಿಂದ ತೀವ್ರ ಗಾಯಗೊಂಡ ಅಬ್ದುಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೆಂಗಳೂರಿನಲ್ಲಿರುವ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಬ್ದುಲ್ ಈದ್ ಹಬ್ಬದ ಆಚರಣೆಗಾಗಿ ತನ್ನ ಮನೆಗೆ ಆಗಮಿಸಿದ್ದರು. ಇನ್ನು ಇದೇ ಮುಂದಿನ ತಿಂಗಳಲ್ಲಿ ಆತನ ಮದುವೆ ನಿಶ್ಚಯವಾಗಿತ್ತು.
ಘಟನೆ ಕುರಿತಂತೆ ರೈಲ್ವೇ ಕೊಡೂರ್ ಪೊಲೀಸರು ಪ್ರಕರಣ ದಾಖಲಿಸಿ  ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT