ಜಾಮಿಯಾ ಮಸೀದಿ ಬಳಿ ಕಿಡಿಗೇಡಿ ಯುವಕರ ಪ್ರತಿಭಟನೆ 
ದೇಶ

ರಂಜಾನ್ ದಿನವೇ ಸೈನಿಕರತ್ತ ಕಲ್ಲು ತೂರಾಟ, ಉಗ್ರ ಝಾಕಿರ್ ಮುಸಾ, ಮಸೂದ್ ಅಜರ್ ಪರ ಘೋಷಣೆ!

ದೇಶಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬದ ಸಂಭ್ರಮದಲ್ಲಿ ತೊಡಗಿದ್ದರೆ ಅತ್ತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮಾತ್ರ ಸ್ಥಳೀಯ ಯುವಕರು ಸೈನಿಕರ ಮೇಲೆ ಕಲ್ಲು ತೂರಾಟ ಮಾಡುವ ಮೂಲಕ ರಂಜಾನ್ ಆಚರಣೆ ಮಾಡಿದ್ದಾರೆ.

ಶ್ರೀನಗರ: ದೇಶಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬದ ಸಂಭ್ರಮದಲ್ಲಿ ತೊಡಗಿದ್ದರೆ ಅತ್ತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮಾತ್ರ ಸ್ಥಳೀಯ ಯುವಕರು ಸೈನಿಕರ ಮೇಲೆ ಕಲ್ಲು ತೂರಾಟ ಮಾಡುವ ಮೂಲಕ ರಂಜಾನ್ ಆಚರಣೆ ಮಾಡಿದ್ದಾರೆ.
ಹೌದು.. ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಈ ಘಟನೆ ನಡೆದಿದ್ದು, ರಂಜಾನ್ ಪ್ರಾರ್ಥನೆ ಬೆನ್ನಲ್ಲೇ ಕೆಲ ಕಿಡಿಗೇಡಿ ಯುವಕರು ಇಲ್ಲಿನ ಖ್ಯಾತ ಜಾಮಿಯಾ ಮಸೀದಿ ಬಳಿ ಸೇರಿ ದೇಶದ ವಿರುದ್ಧ ಘೋಷಣೆ ಕೂಗಿದ್ದಾರೆ. ಅಲ್ಲದೆ ಉಗ್ರ ಝಾಕಿರ್ ಮುಸಾ ಮತ್ತು ಮಸೂದ್ ಅಜರ್ ಸೇರಿದಂತೆ ಉಗ್ರ ಸಂಘಟನೆ ಪರ ಘೋಷಣೆಗಳನ್ನೂ ಕೂಗುತ್ತಾ ದೇಶದ್ರೋಹಿ ಪೋಸ್ಚರ್ ಗಳನ್ನು ಪ್ರದರ್ಶನ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸೈನಿಕರ ಮೇಲೂ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ, ಅಲ್ಲದೆ ದೇಶದ್ರೋಹಿ ಪೋಸ್ಟರ್ ಗಳನ್ನು ಪ್ರದರ್ಶನ ಮಾಡಿದ್ದಾರೆ ಎನ್ನಲಾಗಿದೆ.
ಸೈನಿಕರ ಮೇಲೆ ಕಲ್ಲು ತೂರಾಟ ಮಾಡುತ್ತಲೇ ಸೈನಿಕರು ಲಘು ಲಾಠಿ ಪ್ರಹಾರ ಮಾಡಿ ಕಿಡಿಗೇಡಿಗಳನ್ನು ಚದುರಿಸಿದ್ದಾರೆ ಎನ್ನಲಾಗಿದೆ. 
ಬಾರಾಮುಲ್ಲಾದಲ್ಲೂ ಸೇನೆ ವಿರುದ್ಧ ಪ್ರತಿಭಟನೆ 
ಇನ್ನು ಅತ್ತ ಬಾರಾಮುಲ್ಲಾ ಜಿಲ್ಲೆಯಲ್ಲೂ ಇಂತಹುದೇ ಘಟನೆ ಬೆಳಕಿಗೆ ಬಂದಿದ್ದು, ರಂಜಾನ್ ಪ್ರಾರ್ಥನೆ ಮುಕ್ತಾಯವಾದ ಬೆನ್ನಲ್ಲೇ ಕಿಡಿಗೇಡಿಗಳು ಸೇನೆ ವಿರುದ್ಧ ಘೋಷಣೆ ಕೂಗಿ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಭದ್ರತೆಗೆ ಆಗಮಿಸಿದ್ದ ಸೈನಿಕರ ಪೈಕಿ ಕೆಲವರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಈ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT