ದೇಶ

ಲೋಕಸಭೆ ಅಧಿವೇಶನಕ್ಕೂ ಮುನ್ನ ಅಯೋಧ್ಯಾಗೆ ಉದ್ಧವ್ ಠಾಕ್ರೆ ಭೇಟಿ

Lingaraj Badiger
ಮುಂಬೈ: 17ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗುವ ಮುನ್ನ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ ಎಲ್ಲಾ 18 ನೂತನ ಸಂಸದರೊಂದಿಗೆ ಅಯೋಧ್ಯಾಗೆ ಭೇಟಿ ನೀಡಲಿದ್ದಾರೆ ಎಂದು ಬುಧವಾರ ಮೂಲಗಳು ತಿಳಿಸಿವೆ.
ಉದ್ಧವ್ ಠಾಕ್ರೆ ಅವರು ಅಯೋಧ್ಯಾಗೆ ಭೇಟಿ ನೀಡುತ್ತಿರುವುದು ನಿಜ ಮತ್ತು ಜೂನ್ 17ರಂದು ಸಂಸತ್ ಅಧಿವೇಶನ ಆರಂಭವಾಗುವ ಮುನ್ನವೇ ಅಲ್ಲಿಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ ಎಂದು ಉದ್ಧವ್ ಠಾಕ್ರೆ ಅವರ ಆಪ್ತ ಹಾಗೂ ಸೇನಾ ಮಾಧ್ಯಮ ಉಸ್ತುವಾರಿ ಹರ್ಷಲ್ ಪ್ರಧಾನ್ ಅವರು ತಿಳಿಸಿದ್ದಾರೆ.
ಉದ್ಧವ್ ಠಾಕ್ರೆ ಅವರು ಅಯೋಧ್ಯಾಗೆ ಭೇಟಿ ನೀಡುವ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷ ನವೆಂಬರ್ ನಲ್ಲಿ ಅಯೋಧ್ಯಾಗೆ ಭೇಟಿ ನೀಡಿದ್ದ ಉದ್ಧವ್ ಠಾಕ್ರೆ ಅವರು, ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಬೇಕು ಎಂದು ಒತ್ತಾಯಿಸಿದ್ದರು.
SCROLL FOR NEXT