ಅರುಣ್ ಜೇಟ್ಲಿ 
ದೇಶ

ಸರ್ಕಾರಿ ಬಂಗಲೆ ತೆರವುಗೊಳಿಸಿದ ಅರುಣ್ ಜೇಟ್ಲಿ, ಭದ್ರತಾ ಸಿಬ್ಬಂದಿ ಸಹ ಕಡಿತ

ಬಿಜೆಪಿ ಹಿರಿಯ ನಾಯಕ , ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ತಮ್ಮ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುತ್ತಿದ್ದು, ತಮಗೆ...

ನವದೆಹಲಿ: ಬಿಜೆಪಿ ಹಿರಿಯ ನಾಯಕ , ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ತಮ್ಮ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುತ್ತಿದ್ದು, ತಮಗೆ ಒದಗಿಸಿದ್ದ ಸರ್ಕಾರಿ ಕಾರುಗಳನ್ನು ಹಿಂದಿರುಗಿಸಿದ್ದು, ಭದ್ರತಾ ಸಿಬ್ಬಂದಿಯನ್ನು ಕಡಿತಗೊಳಿಸಿಕೊಂಡಿದ್ದಾರೆ.
ತಮ್ಮ ಖಾಸಗಿ ಸಿಬ್ಬಂದಿಯ ಭಾಗವಾಗಿದ್ದ ಸರ್ಕಾರಿ ಅಧಿಕಾರಿಗಳನ್ನು ತಮ್ಮ ಮೂಲ ಸ್ಥಳಗಳಿಗೆ ವಾಪಸ್ಸು ಕಳುಹಿಸಿದ್ದಾರೆ.
ಬಾಕಿ ಉಳಿಸಿಕೊಂಡಿರುವ ನೀರು, ವಿದ್ಯುತ್ ಹಾಗೂ ದೂರವಾಣಿ ಸೇವೆಯ ಬಿಲ್ಲುಗಳನ್ನು ಪಾವತಿಸುವಂತೆ ತಮ್ಮ ಸಿಬ್ಬಂದಿಗೆ ಸೂಚನೆ ನೀಡಿದ್ದು, ನಿತ್ಯ ತಮ್ಮ ಮನೆಗೆ ಪೂರೈಸಲಾಗುತ್ತಿದ್ದ 25 ದಿನ ಪತ್ರಿಕೆಗಳನ್ನು ನಿಲ್ಲಿಸಿದ್ದಾರೆ.
ಅರುಣ್ ಜೇಟ್ಲಿ ಅವರು ದಕ್ಷಿಣ ದೆಹಲಿಯಲ್ಲಿರುವ ತಮ್ಮ ಸ್ವಂತ ಮನೆಗೆ ಸ್ಥಳಾಂತರಗೊಳ್ಳಲಿದ್ದಾರೆ. ಆರೋಗ್ಯ ಕಾರಣಗಳಿಗಾಗಿ ಸರ್ಕಾರಿ ಬಂಗಲೆ ತೊರೆಯಲು ಕುಟುಂಬ ವರ್ಗ ಬಯಸಿದೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಸಂಸದರು, ಲೋಕಸಭೆ ವಿಸರ್ಜನೆಗೊಂಡ ತಿಂಗಳೊಳಗೆ ವಾಸವಾಗಿದ್ದ ಸರ್ಕಾರಿ ನಿವಾಸ ತೆರವುಗೊಳಿಸಬೇಕು ಎಂಬ ಸುಪ್ರಿಂ ಕೋರ್ಟ್ ಆದೇಶವನ್ನು, ಸರ್ವೋಚ್ಛ ನ್ಯಾಯಾಲಯದ ಹಿರಿಯ ವಕೀಲರೂ ಆಗಿರುವ ಜೇಟ್ಲಿ ಅಕ್ಷರಶಃ ಪಾಲಿಸಲು ಮುಂದಾಗಿದ್ದಾರೆ.
ಅನಾರೋಗ್ಯದಿಂದ ಚೇತರಿಸಿಕೊಂಡ ನಂತರ ಪುಟ್ಟ ಸರ್ಕಾರಿ ಬಂಗಲೆಗೆ ಸ್ಥಳಾಂತರಗೊಳ್ಳಬೇಕು ಎಂಬುದು ಜೇಟ್ಲಿ ಅವರ ಬಯಕೆಯಾಗಿದೆ.
ಮುಂದಿನ ನವೆಂಬರ್ ವೇಳೆಗೆ ಕೇಂದ್ರ ಮಂತ್ರಿ ಮಂಡಲ ಸೇರ್ಪಡೆಯಾಗಬಹುದೆಂಬ ಆಶಯವನ್ನು ಜೇಟ್ಲಿ ಅವರು ಹೊಂದಿದ್ದು, ಆನಾರೋಗ್ಯದಿಂದ ಚೇತರಿಸಿಕೊಳ್ಳಲು ನಾಲ್ಕು ತಿಂಗಳ ವಿಶ್ರಾಂತಿಯಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT