ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ 
ದೇಶ

ಆಂಧ್ರ ಪ್ರದೇಶದಲ್ಲಿ ಸಿಬಿಐಗೆ ಅವಕಾಶ, ನಾಯ್ಡು ಆದೇಶ ರದ್ದುಗೊಳಿಸಿದ ಜಗನ್

ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದ ಈ ಹಿಂದಿನ ಚಂದ್ರಬಾಬು ನಾಯ್ಡು ಸರ್ಕಾರದ ವಿವಾದಾತ್ಮಕ ಸರ್ಕಾರದ ಆದೇಶವನ್ನು ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ರದ್ದುಗೊಳಿಸಿದ್ದು, ಸಿಬಿಐ ತನಿಖೆಗೆ ಹಾದಿ ಸುಗಮಗೊಳಿಸಲಾಗಿದೆ.

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಕೇಂದ್ರ ತನಿಖಾ ಸಂಸ್ಥೆ -ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದ ಈ ಹಿಂದಿನ ಚಂದ್ರಬಾಬು ನಾಯ್ಡು  ಸರ್ಕಾರದ ವಿವಾದಾತ್ಮಕ ಸರ್ಕಾರದ ಆದೇಶವನ್ನು ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ  ರದ್ದುಗೊಳಿಸಿದ್ದು,  ಸಿಬಿಐ ತನಿಖೆಗೆ ಹಾದಿ ಸುಗಮಗೊಳಿಸಲಾಗಿದೆ. 
ಕಳೆದ ವರ್ಷ ನವೆಂಬರ್ 8 ರಂದು ಕೇಂದ್ರ ಸರ್ಕಾರಿ ಅಧಿಕಾರಿಗಳು, ಕೇಂದ್ರ ಸಂಸ್ಥೆಗಳು, ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ಸಿಬಿಐ  ತನಿಖೆ ನಡೆಸಲು , ಶೋಧ ಕಾರ್ಯಾಚರಣೆ ನಡೆಸಲು ಇದ್ದಂತಹ  ಒಪ್ಪಂದವನ್ನು ಹಿಂತೆಗೆದುಕೊಂಡಿತ್ತು. 
ಮೇ 30 ರಂದು ಅಧಿಕಾರಕ್ಕೆ ಬಂದ ವೈಎಸ್ ಆರ್ ಕಾಂಗ್ರೆಸ್ ಪಕ್ಷ  ಇಂದು ನವೆಂಬರ್ 8 ರಂದು ಚಂದ್ರಬಾಬು ನಾಯ್ಡು ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ. ವೈಎಸ್ ಜಗನ್ ಮೋಹನ್ ರೆಡ್ಡಿ  ನಿರ್ದೇಶನದ ಮೇರೆಗೆ ವಿಶೇಷ ಮುಖ್ಯ ಕಾರ್ಯದರ್ಶಿ ಮನಮೋಹನ್ ಸಿಂಗ್ ಈ ಆದೇಶ ಪ್ರಕಟಿಸಿದ್ದಾರೆ. 
ದೆಹಲಿ ವಿಶೇಷ ಪೊಲೀಸ್ ರಚನಾ ಕಾಯ್ದೆ 1946 ರ ವಿನಾಯಿತಿ ಅಡಿಯಲ್ಲಿ ಕಳೆದ ವರ್ಷ ನವೆಂಬರ್ 8 ರಂದು ಹೊರಡಿಸಲಾದ ಸರ್ಕಾರದ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದರಿಂದಾಗಿ ಆಂಧ್ರ ಪ್ರದೇಶದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸಲು ಸಿಬಿಐಗೆ ಎಲ್ಲಾ ರೀತಿಯ ಅಧಿಕಾರ ಸಿಕ್ಕಂತಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT