ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ 
ದೇಶ

ಆಂಧ್ರ ಪ್ರದೇಶದಲ್ಲಿ ಸಿಬಿಐಗೆ ಅವಕಾಶ, ನಾಯ್ಡು ಆದೇಶ ರದ್ದುಗೊಳಿಸಿದ ಜಗನ್

ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದ ಈ ಹಿಂದಿನ ಚಂದ್ರಬಾಬು ನಾಯ್ಡು ಸರ್ಕಾರದ ವಿವಾದಾತ್ಮಕ ಸರ್ಕಾರದ ಆದೇಶವನ್ನು ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ರದ್ದುಗೊಳಿಸಿದ್ದು, ಸಿಬಿಐ ತನಿಖೆಗೆ ಹಾದಿ ಸುಗಮಗೊಳಿಸಲಾಗಿದೆ.

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಕೇಂದ್ರ ತನಿಖಾ ಸಂಸ್ಥೆ -ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದ ಈ ಹಿಂದಿನ ಚಂದ್ರಬಾಬು ನಾಯ್ಡು  ಸರ್ಕಾರದ ವಿವಾದಾತ್ಮಕ ಸರ್ಕಾರದ ಆದೇಶವನ್ನು ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ  ರದ್ದುಗೊಳಿಸಿದ್ದು,  ಸಿಬಿಐ ತನಿಖೆಗೆ ಹಾದಿ ಸುಗಮಗೊಳಿಸಲಾಗಿದೆ. 
ಕಳೆದ ವರ್ಷ ನವೆಂಬರ್ 8 ರಂದು ಕೇಂದ್ರ ಸರ್ಕಾರಿ ಅಧಿಕಾರಿಗಳು, ಕೇಂದ್ರ ಸಂಸ್ಥೆಗಳು, ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ಸಿಬಿಐ  ತನಿಖೆ ನಡೆಸಲು , ಶೋಧ ಕಾರ್ಯಾಚರಣೆ ನಡೆಸಲು ಇದ್ದಂತಹ  ಒಪ್ಪಂದವನ್ನು ಹಿಂತೆಗೆದುಕೊಂಡಿತ್ತು. 
ಮೇ 30 ರಂದು ಅಧಿಕಾರಕ್ಕೆ ಬಂದ ವೈಎಸ್ ಆರ್ ಕಾಂಗ್ರೆಸ್ ಪಕ್ಷ  ಇಂದು ನವೆಂಬರ್ 8 ರಂದು ಚಂದ್ರಬಾಬು ನಾಯ್ಡು ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ. ವೈಎಸ್ ಜಗನ್ ಮೋಹನ್ ರೆಡ್ಡಿ  ನಿರ್ದೇಶನದ ಮೇರೆಗೆ ವಿಶೇಷ ಮುಖ್ಯ ಕಾರ್ಯದರ್ಶಿ ಮನಮೋಹನ್ ಸಿಂಗ್ ಈ ಆದೇಶ ಪ್ರಕಟಿಸಿದ್ದಾರೆ. 
ದೆಹಲಿ ವಿಶೇಷ ಪೊಲೀಸ್ ರಚನಾ ಕಾಯ್ದೆ 1946 ರ ವಿನಾಯಿತಿ ಅಡಿಯಲ್ಲಿ ಕಳೆದ ವರ್ಷ ನವೆಂಬರ್ 8 ರಂದು ಹೊರಡಿಸಲಾದ ಸರ್ಕಾರದ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದರಿಂದಾಗಿ ಆಂಧ್ರ ಪ್ರದೇಶದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸಲು ಸಿಬಿಐಗೆ ಎಲ್ಲಾ ರೀತಿಯ ಅಧಿಕಾರ ಸಿಕ್ಕಂತಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT