ನವಜೋತ್ ಸಿಂಗ್ ಸಿಧು 
ದೇಶ

ಪಂಜಾಬ್: ಮುಖ್ಯಮಂತ್ರಿ ಜೊತೆಗೆ ಮುಸುಕಿನ ಗುದ್ದಾಟ, ಸಿಧು ಕೈ ತಪ್ಪಿದ ಪ್ರಮುಖ ಖಾತೆ

ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜೊತೆಗಿನ ಮುಸುಕಿನ ಗುದ್ದಾಟದಿಂದಾಗಿ ನವಜೋತ್ ಸಿಂಗ್ ಸಿಧು ಅವರ ಬಳಿಯಿದ್ದ ಸ್ಥಳೀಯ ಸರ್ಕಾರದ ಇಲಾಖೆ ಖಾತೆಯನ್ನು ಕಿತ್ತುಕೊಂಡು ಇಂಧನ ಖಾತೆಯನ್ನು ನೀಡಲಾಗಿದೆ.

ಚಂಡೀಗಡ: ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜೊತೆಗಿನ ಮುಸುಕಿನ ಗುದ್ದಾಟದಿಂದಾಗಿ  ನವಜೋತ್ ಸಿಂಗ್  ಸಿಧು ಅವರ ಬಳಿಯಿದ್ದ ಸ್ಥಳೀಯ ಸರ್ಕಾರದ ಇಲಾಖೆ ಖಾತೆಯನ್ನು ಕಿತ್ತುಕೊಂಡು  ಇಂಧನ ಖಾತೆಯನ್ನು ನೀಡಲಾಗಿದೆ.
ಲೋಕಸಭಾ ಚುನಾವಣೆ ಮುಗಿದ ನಂತರ ನಡೆದ ಮೊದಲ ರಾಜ್ಯ ಸಂಪುಟ ಸಭೆ ಆದ ಕೆಲ ತಾಸುಗಳಲ್ಲಿಯೇ ಸಂಪುಟ ಪುನರ್ ರಚನೆ ಮಾಡಲಾಗಿದ್ದು, ಅಮರೀಂದರ್ ಸಿಂಗ್ ಬಹುತೇಕ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.
ಸಿಧು ಅವರಿಂದ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ವ್ಯವಹಾರಗಳ ಖಾತೆಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. 
ನಾಲ್ವರು ಮಂತ್ರಿಗಳನ್ನು ಹೊರತುಪಡಿಸಿ, ಇನ್ನಿತರ ಹಲವು ಖಾತೆಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಹೊಸ ಜವಾಬ್ದಾರಿ ವಹಿಸಲಾಗಿದೆ.
ಸಂಟುಪ ಪುನರ್ ರಚನೆಯಿಂದಾಗಿ  ಆಡಳಿತದಲ್ಲಿ ಪ್ರಾಮಾಣಿಕತೆ ಹಾಗೂ ದಕ್ಷತೆ ಹೆಚ್ಚಲು ಹಾಗೂ ಸರ್ಕಾರ ಸುಗಮವಾಗಿ ಸಾಗಲು ನೆರವಾಗಲಿದೆ ಎಂದು ಮುಖ್ಯಮಂತ್ರಿ ಕ್ಯಾಪ್ಟನ್  ಅಮರೀಂದರ್ ಸಿಂಗ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT