ಶೌಚಾಲಯದಲ್ಲಿ ಗಾಂಧೀಜಿ ಚಿತ್ರವಿದ್ದ ಟೈಲ್ಸ್ ಬಳಕೆ:ಅಧಿಕಾರಿ ಅಮಾನತು 
ದೇಶ

ಶೌಚಾಲಯದಲ್ಲಿ ಗಾಂಧೀಜಿ ಚಿತ್ರವಿದ್ದ ಟೈಲ್ಸ್ ಬಳಕೆ: ಅಧಿಕಾರಿ ಅಮಾನತು

ಸ್ವಚ್ಚ ಭಾರತ ಅಭಿಯಾನದಡಿ ನಿರ್ಮಿಸಲಾಗಿದ್ದ ಶೌಚಾಯದ ಗೋಡೆಗಳ ಮೇಲೆ ಗಾಂಧೀಜಿ ಹಾಗೂ ಅಶೋಕ ಚಕ್ರಗಳ ಚಿತ್ರವಿರುವ ಟೈಲ್ಸ್ ಕಂಡುಬಂದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು ....

ಬುಲಂದರಷಹರ್: ಸ್ವಚ್ಚ ಭಾರತ ಅಭಿಯಾನದಡಿ ನಿರ್ಮಿಸಲಾಗಿದ್ದ ಶೌಚಾಯದ ಗೋಡೆಗಳ ಮೇಲೆ ಗಾಂಧೀಜಿ ಹಾಗೂ ಅಶೋಕ ಚಕ್ರಗಳ ಚಿತ್ರವಿರುವ ಟೈಲ್ಸ್ ಕಂಡುಬಂದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು ಘಟನೆಗೆ ಸಂಬಂಧಿಸಿ ಗ್ರಾಮೀಣಾಭಿವೃದ್ಧಿ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಇಖ್ವಾರಿ ಗ್ರಾಮದ ಮುಖ್ಯಸ್ಥರಿಗೆ ಸಹ ನೋಟೀಸ್ ನೀಡಲಾಗಿದೆ.
ಶೌಚಾಲಯದ ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.ಗ್ರಾಮಸ್ಥರು ಹೇಳುವಂತೆ ಗ್ರಾಮದ ಮುಖ್ಯಸ್ಥನ ಸೂಚನೆಯಂತೆ ಶೌಚಾಲಯಕ್ಕೆ ಈ ಟೈಲ್ಸ್ ಗಳನ್ನು ಬಳಸಲಾಗಿತ್ತು.
"ನಾವು ಅದರ ವಿರುದ್ಧ ದೂರು ನೀಡಿದಾಗ, ಉನ್ನತಾಧಿಕಾರಿಗಳ ತೀರ್ಮಾನದಂತೆಇದನ್ನು ನಿರ್ಮಿಸಲಾಗಿದೆ. ನಾವು ಇದರಲ್ಲಿ ಮಧ್ಯೆ ಪ್ರವೇಶಿಸಬಾರದೆಂದು ನಮಗೆ ತಿಳಿಸಲಾಗಿತ್ತು. ಆದರೆ ಶೌಚಾಲಯದ ವೀಡಿಯೋ  ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ನಂತರ ಕ್ರಮ ತೆಗೆದುಕೊಳ್ಳಲಾಗಿದೆ "ಅವರು ಹೇಳಿದರು.
ಪ್ರಾಥಮಿಕ ತನಿಖೆಯ ಬಳಿಕ ಗ್ರಾಮೀಣಾಭಿವೃದ್ಧಿಅಧಿಕಾರಿ ಸಂತೋಷ್ ಕುಮಾರ್ ಅವರನ್ನು ಅಮಾನತ್ತುಗೊಳಿಸಲಾಗಿದ್ದು ಗ್ರಾಮದ ಮುಖ್ಯಸ್ಥೆ ಸಾವಿತ್ರಿ ದೇವಿಗೆ ನೋಟೀಸ್ ನೀಡಲಾಗಿದೆ.
ಗ್ರಾಮದಲ್ಲಿ ನಿರ್ಮಿಸಿದ 13 ಶೌಚಾಲಯಗಳ ಗೋಡೆಗಳ ಮೇಲೆ ಗಾಂಧೀಜಿ ಹಾಗೂ ಅಶೋಕ ಚಕ್ರವಿರುವ ಟೈಲ್ಸ್ ಗಳನ್ನು ಬಳಸಲಾಗಿತ್ತು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಈ ಗ್ರಾಮದಲ್ಲಿ 508 ಶೌಚಾಲಯಗಳನ್ನು ಸ್ವಚ್ಚ ಬಾರತ್ ಅಭಿಯಾನದಡಿ ನಿರ್ಮಾಣ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT