ಎನ್ ಸಿಆರ್: ವಿದೇಶಿಗನೆಂದು ಘೋಷಿಸಲಾಗಿದ್ದ ಕಾರ್ಗಿಲ್ ಯುದ್ಧದ ಸೇನಾನಿ ಬಂಧಮುಕ್ತ! 
ದೇಶ

ಎನ್ ಸಿಆರ್: ವಿದೇಶಿಗನೆಂದು ಘೋಷಿಸಲಾಗಿದ್ದ ಕಾರ್ಗಿಲ್ ಯುದ್ಧದ ಸೇನಾನಿ ಬಂಧಮುಕ್ತ!

ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಯೋಧ ಮೊಹಮ್ಮದ್ ಸನಾವುಲ್ಲಾ ಅವರನ್ನು ಬಂಧಮುಕ್ತಗೊಳಿಸಲಾಗಿದೆ.

ಗುವಾಹಟಿ: ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಯೋಧ ಮೊಹಮ್ಮದ್ ಸನಾವುಲ್ಲಾ ಅವರನ್ನು ಬಂಧಮುಕ್ತಗೊಳಿಸಲಾಗಿದೆ. 
ಅಸ್ಸಾಂ ನ ನ್ಯಾಯಾಧಿಕರಣ ಕಳೆದ ತಿಂಗಳು ಕಾರ್ಗಿಲ್ ಸೇನಾನಿಯನ್ನು ವಿದೇಶಿಗ ಎಂದು ಘೋಷಿಸಿತ್ತು. ಈಗ ಗುವಾಹಟಿ ಹೈಕೋರ್ಟ್ ಸನಾವುಲ್ಲಾಗೆ ಜಾಮೀನು ನೀಡಿದ ನಂತರ ಯೋಧನನ್ನು ಬಂಧಮುಕ್ತಗೊಳಿಸಲಾಗಿದೆ. 
ಸನಾವುಲ್ಲಾಗೆ ಕಾಮರೂಪ ಜಿಲ್ಲೆಯನ್ನು ತೊರೆಯದಂತೆ ಕೋರ್ಟ್ ಸೂಚನೆ ನೀಡಿದೆ. ಇದೇ ವೇಳೆ ಕೋರ್ಟ್ ಕೇಂದ್ರ ಸರ್ಕಾರ, ಅಸ್ಸಾಂ ಸರ್ಕಾರ, ಬೋಕೋನಲ್ಲಿರುವ ವಿದೇಶಿ ಟ್ರಿಬ್ಯುನಲ್, ಎನ್ ಆರ್ ಸಿ ಅಧಿಕಾರಿಗಳು ಹಾಗೂ ಎನ್ ಆರ್ ಸಿ ಪ್ರಕ್ರಿಯೆ ವೇಳೆ ಸನಾವುಲ್ಲ ಅವರ ದಾಖಲೆಗಳನ್ನು ಪರಿಶೀಲಿಸಿದ್ದ ಅಧಿಕಾರಿಗಳಿಗೆ ಕೋರ್ಟ್ ನೊಟೀಸ್ ಜಾರಿಗೊಳಿಸಿದೆ. 
ಎನ್ ಆರ್ ಸಿ ಪ್ರಕ್ರಿಯೆ ವೇಳೇ ನಿವೃತ್ತ ಯೋಧ ಸನಾವುಲ್ಲಾ ಅವರನ್ನು ವಿದೇಶಿಗ ಎಂದು ಘೋಷಿಸಿ ಗೋವಾಲ್ಪಾರದಲ್ಲಿನ ಡಿಟೆನ್ಷನ್ ಕೇಂದ್ರಕ್ಕೆ ಕಳಿಸಲಾಗಿತ್ತು. 2017 ರಲ್ಲಿ ನಿವೃತ್ತರಾಗಿದ್ದ ಯೋಧ ಸನಾವುಲ್ಲಾಗೆ 2014 ರಲ್ಲೇ ರಾಷ್ಟ್ರಪತಿ ಪದಕವೂ ದೊರೆತಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!