ಎನ್ ಸಿಆರ್: ವಿದೇಶಿಗನೆಂದು ಘೋಷಿಸಲಾಗಿದ್ದ ಕಾರ್ಗಿಲ್ ಯುದ್ಧದ ಸೇನಾನಿ ಬಂಧಮುಕ್ತ! 
ದೇಶ

ಎನ್ ಸಿಆರ್: ವಿದೇಶಿಗನೆಂದು ಘೋಷಿಸಲಾಗಿದ್ದ ಕಾರ್ಗಿಲ್ ಯುದ್ಧದ ಸೇನಾನಿ ಬಂಧಮುಕ್ತ!

ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಯೋಧ ಮೊಹಮ್ಮದ್ ಸನಾವುಲ್ಲಾ ಅವರನ್ನು ಬಂಧಮುಕ್ತಗೊಳಿಸಲಾಗಿದೆ.

ಗುವಾಹಟಿ: ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಯೋಧ ಮೊಹಮ್ಮದ್ ಸನಾವುಲ್ಲಾ ಅವರನ್ನು ಬಂಧಮುಕ್ತಗೊಳಿಸಲಾಗಿದೆ. 
ಅಸ್ಸಾಂ ನ ನ್ಯಾಯಾಧಿಕರಣ ಕಳೆದ ತಿಂಗಳು ಕಾರ್ಗಿಲ್ ಸೇನಾನಿಯನ್ನು ವಿದೇಶಿಗ ಎಂದು ಘೋಷಿಸಿತ್ತು. ಈಗ ಗುವಾಹಟಿ ಹೈಕೋರ್ಟ್ ಸನಾವುಲ್ಲಾಗೆ ಜಾಮೀನು ನೀಡಿದ ನಂತರ ಯೋಧನನ್ನು ಬಂಧಮುಕ್ತಗೊಳಿಸಲಾಗಿದೆ. 
ಸನಾವುಲ್ಲಾಗೆ ಕಾಮರೂಪ ಜಿಲ್ಲೆಯನ್ನು ತೊರೆಯದಂತೆ ಕೋರ್ಟ್ ಸೂಚನೆ ನೀಡಿದೆ. ಇದೇ ವೇಳೆ ಕೋರ್ಟ್ ಕೇಂದ್ರ ಸರ್ಕಾರ, ಅಸ್ಸಾಂ ಸರ್ಕಾರ, ಬೋಕೋನಲ್ಲಿರುವ ವಿದೇಶಿ ಟ್ರಿಬ್ಯುನಲ್, ಎನ್ ಆರ್ ಸಿ ಅಧಿಕಾರಿಗಳು ಹಾಗೂ ಎನ್ ಆರ್ ಸಿ ಪ್ರಕ್ರಿಯೆ ವೇಳೆ ಸನಾವುಲ್ಲ ಅವರ ದಾಖಲೆಗಳನ್ನು ಪರಿಶೀಲಿಸಿದ್ದ ಅಧಿಕಾರಿಗಳಿಗೆ ಕೋರ್ಟ್ ನೊಟೀಸ್ ಜಾರಿಗೊಳಿಸಿದೆ. 
ಎನ್ ಆರ್ ಸಿ ಪ್ರಕ್ರಿಯೆ ವೇಳೇ ನಿವೃತ್ತ ಯೋಧ ಸನಾವುಲ್ಲಾ ಅವರನ್ನು ವಿದೇಶಿಗ ಎಂದು ಘೋಷಿಸಿ ಗೋವಾಲ್ಪಾರದಲ್ಲಿನ ಡಿಟೆನ್ಷನ್ ಕೇಂದ್ರಕ್ಕೆ ಕಳಿಸಲಾಗಿತ್ತು. 2017 ರಲ್ಲಿ ನಿವೃತ್ತರಾಗಿದ್ದ ಯೋಧ ಸನಾವುಲ್ಲಾಗೆ 2014 ರಲ್ಲೇ ರಾಷ್ಟ್ರಪತಿ ಪದಕವೂ ದೊರೆತಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT