ಸಂಗ್ರಹ ಚಿತ್ರ 
ದೇಶ

ವಾರಣಾಸಿಯಷ್ಟೇ ಕೇರಳ ಕೂಡ ನನ್ನ ಮನಸ್ಸಿಗೆ ಹತ್ತಿರವಾದದ್ದು: ಪ್ರಧಾನಿ ಮೋದಿ

ವಾರಣಾಸಿಯಷ್ಟೇ ಕೇರಳ ಕೂಡ ನನ್ನ ಮನಸ್ಸಿಗೆ ಹತ್ತಿರವಾದದ್ದು ಎಂದು ಪ್ರಧಾನಿ ಮೋದಿ ಶನಿವಾರ ಹೇಳಿದ್ದಾರೆ.

ಗುರುವಾಯೂರ್: ವಾರಣಾಸಿಯಷ್ಟೇ ಕೇರಳ ಕೂಡ ನನ್ನ ಮನಸ್ಸಿಗೆ ಹತ್ತಿರವಾದದ್ದು ಎಂದು ಪ್ರಧಾನಿ ಮೋದಿ ಶನಿವಾರ ಹೇಳಿದ್ದಾರೆ.
ಇಂದು ಬೆಳಗ್ಗೆ ಕೇರಳದ ಗುರುವಾಯೂರ್ ದೇಗುಲಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ದೇವಾಲಯದಲ್ಲಿ ಕಮಲದ ಹೂವಿನ ತುಲಾಭಾರ ಸೇವೆಯಲ್ಲಿ ಭಾಗಿಯಾದರು. ಗುರುವಾಯೂರು ದೇವಸ್ಥಾನದಲ್ಲಿ ಸುಮಾರು ಒಂದು ಗಂಟೆ ಕಾಲ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದ ಪ್ರಧಾನಿ ನಂತರ ಕೇರಳ ರಾಜ್ಯ ಬಿಜೆಪಿ ಸಮಿತಿ ಏರ್ಪಡಿಸಿರುವ ಅಭಿನಂದನಾ ಸಭೆಯಲ್ಲಿ ಭಾಗವಹಿಸಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
'ಉಡುಪಿಯಾಗಲಿ, ಗುರುವಾಯೂರ್ ಅಥವಾ ದ್ವಾರಕಾದೊಂದಿಗೆ ಗುಜರಾತ್ ಜನತೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ದ್ವರಕಾದೀಶ ಮತ್ತು ಕೃಷ್ಣನೊಂದಿಗೆ ಗುಜರಾತ್ ಜನತೆ ಧಾರ್ಮಿಕ ಮತ್ತು ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಕೆಲವು ಪಂಡಿತರು ಕೇರಳದಲ್ಲಿ ಬಿಜೆಪಿ ಇನ್ನು ಖಾತೆಯನ್ನೇ ತೆರೆದಿಲ್ಲ ಎಂದು ವಿಶ್ಲೇಷಣೆ ಮಾಡುತ್ತಿದ್ದಾರೆ. ಆದರೆ ನಾನು ಹೇಳುವುದಿಷ್ಟೇ ಇದು ನಮ್ಮ ನೆಲ. ನಮ್ಮ ನೆಲದ ಜನತೆಗೆ ಧನ್ಯವಾದ ಹೇಳಲು ನಾನು ಇಲ್ಲಿಗೆ ಬಂದಿದ್ದೇನೆ. ಚುನಾವಣೆ ವೇಳೆ ಮಾತ್ರವಲ್ಲ ಚುನಾವಣೆ ಬಳಿಕವೂ ನಾವು ನಮ್ಮ ಜವಾಬ್ದಾರಿ ಮುಂದುವರೆಸಬೇಕು. 130 ಕೋಟಿ ಜನರು ನಮ್ಮನ್ನು ಆರಿಸಿರುವಾಗ ಅವರ ಸೇವೆಗಾಗಿ ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ಪ್ರಜೆಗಳು ಮುಂದಿನ ಐದು ವರ್ಷಗಳ ಕಾಲಾವಧಿಗೆ ತಮ್ಮ ಜನ ಪ್ರತಿನಿಧಿಗಳನ್ನು ಆರಿಸುತ್ತಾರೆ. ಹೀಗಾಗಿ ನಾನು ಮುಂದಿನ ಐದು ವರ್ಷಗಳಿಗೆ ಅವರ ಸೇವಕರು. ದೇಶದ ಜನರಿಗೆ ಸೇವೆ ಮಾಡಲು ನಾವು ಬದ್ಧರಾಗಿರಬೇಕು ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕಾರ್ಯಕರ್ತರು ಕೇವಲ ಚುನಾವಣೆಗೆ ಮಾತ್ರ ಸೀಮಿತರಾದವರಲ್ಲ. 365 ದಿನವೂ ಪಕ್ಷದ ವತಿಯಿಂದ ಜನರಿಗಾಗಿ ಶ್ರಮಿಸುತ್ತಾರೆ. ನಾವು ಕೇವಲ ಸರ್ಕಾರ ರಚನೆಗಾಗಿ ಮಾತ್ರ ರಾಜಕೀಯಕ್ಕೆ ಬಂದಿಲ್ಲ. ದೇಶ ನಿರ್ಮಾಣಕ್ಕಾಗಿ ಬಂದಿದ್ದೇವೆ ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!