ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ 
ದೇಶ

ಕಥುವಾ ಅತ್ಯಾಚಾರ ತಿರ್ಪು: ಒಮರ್, ಮೆಹಬೂಬಾ ಮುಫ್ತಿ ಸ್ವಾಗತ

ಕಥುವಾ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಪಠಾಣ್ ಕೋಟ್ ನ್ಯಾಯಾಲಯದ ತೀರ್ಪನ್ನು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಸ್ವಾಗತಿಸಿದ್ದಾರೆ.

ಶ್ರೀನಗರ: ಕಥುವಾ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಪಠಾಣ್ ಕೋಟ್ ನ್ಯಾಯಾಲಯದ ತೀರ್ಪನ್ನು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಸ್ವಾಗತಿಸಿದ್ದಾರೆ.
"ಅಪರಾಧಿಗಳು ಕಾನೂನಿನ ಅಡಿಯಲ್ಲಿಗಂಭೀರ ಶಿಕ್ಷೆಗೆ ಅರ್ಹರಾಗಿದ್ದಾರೆ ಮತ್ತು ಆಪಾದಿತರನ್ನು ಸಮರ್ಥಿಸಿಕೊಂಡಿದ್ದ ರಾಜಕಾರಣಿಗಳಿಗೆ ಇದರಿಂದ ತಕ್ಕ ಪಾಠ ಕಲಿತಂತಾಗಿದೆ.ಕಾನುನು ಎಲ್ಲಕ್ಕಿಂತ ದೊಡ್ಡದು" ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.
"ಎಂಟು ವರ್ಷದ ಬಾಲಕಿಯನ್ನು ಮಾದಕ ವ್ಯಸನಿಗಳು ಅತ್ಯಾಚಾರ ನಡೆಸಿ ಕ್ರೂರವಾಗಿ ಶಿಕ್ಷಿಸಿದ್ದರು. ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿಲೋಪವಿಲ್ಲ ಎಂದು ಭರವಸೆ ಇಡುತ್ತೇನೆ. ಅಪರಾಧಿಗಳು ಕಠಿಣತಮ ಶಿಕ್ಷೆಗೆ ಗುರಿಯಾಗಲಿದ್ದಾರೆ"ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಕಳೆದ ವರ್ಷ ಜನವರಿಯಲ್ಲಿ ಕಥುವಾ ಜಿಲ್ಲೆಯ ರಸ್ನಾ ಪ್ರದೇಶದಲ್ಲಿ ಮುಸ್ಲಿಂ ಅಲೆಮಾರಿ ಜನಾಂಗದ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಬಳಿಕ ಕ್ರೂರವಾಗಿ ಕೊಂದು ಹಾಕಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದಲ್ಲಿ ಏಳು ಆರೋಪಿಗಳ ಪೈಕಿ ಆರು ಆರೋಪಿಗಳನ್ನು ಪಠಾಣ್ ಕೋಟ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT