ಕೊಳವೆ ಬಾವಿಗೆ ಬಿದ್ದಿದ್ದ ಮಗು 
ದೇಶ

ಪಂಜಾಬ್: ಸತತ 110 ಗಂಟೆಗಳ ಕಾರ್ಯಾಚರಣೆ, ಕೊಳವೆ ಬಾವಿಯಿಂದ ಹೊರತೆಗೆದಿದ್ದ ಬಾಲಕ ಸಾವು!

ಕಳೆದ ಗುರುವಾರ ಪಂಜಾಬ್ ನಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನನ್ನು ಸತತ 110 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಯಿತಾದರೂ, ದುರಾದೃಷ್ಟವಶಾತ್ ಆ ಬಾಲಕ ಸಾವನ್ನಪ್ಪಿದ್ದಾನೆ.

ಪಂಜಾಬ್: ಕಳೆದ ಗುರುವಾರ ಪಂಜಾಬ್ ನಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನನ್ನು ಸತತ 110 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಯಿತಾದರೂ, ದುರಾದೃಷ್ಟವಶಾತ್ ಆ  ಬಾಲಕ ಸಾವನ್ನಪ್ಪಿದ್ದಾನೆ.
ಜೂನ್ 6 ರಂದು ಪಂಜಾಬ್‌ ಸಂಗ್ರೂರ್ ನ ಭಗವಾನ್‌ಪೂರ್ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಫತೇಹ್ ವಿರ್ ಸಿಂಗ್‌ ನನ್ನು ಅಗ್ನಿ ಶಾಮಕ ದಳ, ತಜ್ಞರು ಸತತ 110 ಗಂಟೆಗಳ ಕಾರ್ಯಾಚರಣೆ ಬಳಿಕ ಜೀವಂತವಾಗಿ ಹೊರತೆಗೆದಿದ್ದರು. ಆದರೆ ಇದೀಗ ಮಗು ಬದುಕುಳಿಯಲ್ಲಿಲ್ಲ ಎಂದು ಮಗುವಿನ ಅಜ್ಜ ರೋಹಿ ಸಿಂಗ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 
ಗುರುವಾರ (ಜೂನ್ 6) ಆಟ ಆಡುತ್ತಿರಬೇಕಾದರೆ ಸಂಜೆ 4 ಗಂಟೆ ಸಮಯದಲ್ಲಿ ಸುಮಾರು 150 ಅಡಿ ಆಳದ ಕೊಳವೆ ಬಾವಿಗೆ ಫತೇಹ್ ವಿರ್ ಸಿಂಗ್ ಬಿದ್ದಿದ್ದ. ವಿಚಾರ ತಿಳಿದ ಕೂಡಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್‌), ಸ್ಥಳೀಯರು ಹಾಗೂ ಪೊಲೀಸರ ಸಹಕಾರದಿಂದ ಮಂಗಳವಾರ ಮುಂಜಾನೆ 5:12ಕ್ಕೆ ಮಗುವನ್ನು ರಕ್ಷಿಸಲಾಗಿತ್ತು. ಬಳಿಕ ಪೊಲೀಸರ ಬಿಗಿ ಭದ್ರತೆಯಲ್ಲಿ ಮಗುವನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. "ಫತೇಹ್‌ವಿರ್‌ನನ್ನು ಹೊರತೆಗೆಯಲಾಗಿದ್ದು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದರೆ ಇದೀಗ ಮಗು ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆಯಷ್ಟೇ ಮಗು ಫತೇಹ್ ವಿರ್ ಸಿಂಗ್ 2 ವರ್ಷ ತುಂಬಿತ್ತು ಎಂದು ಆತನ ಪೋಷಕರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!