ರಾಷ್ಟ್ರೀಯ ಭದ್ರತಾ ದಳ 
ದೇಶ

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ: ಕೊಯಂಬತ್ತೂರಿನ ಏಳು ಕಡೆಗಳಲ್ಲಿ ಎನ್ಐಎ ದಾಳಿ

ಕಳೆದ ಏಪ್ರಿಲ್ ನಲ್ಲಿ ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಪಟ್ಟಂತೆ...

ಕೊಯಂಬತ್ತೂರು: ಕಳೆದ ಏಪ್ರಿಲ್ ನಲ್ಲಿ ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಪಟ್ಟಂತೆ ಮಹತ್ವದ ಸುಳಿವು ಪತ್ತೆಗೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳ ಕೊಚ್ಚಿ ತಂಡ ಬುಧವಾರ ಬೆಳಗ್ಗೆಯೇ ನಗರದ ಏಳು ಕಡೆಗಳಲ್ಲಿ ಶೋಧ ಕಾರ್ಯ ನಡೆಸಿದೆ.
ಶ್ರೀಲಂಕಾದ ಕೊಲಂಬೊದಲ್ಲಿ ಚರ್ಚ್ ಮತ್ತು ಹೊಟೇಲ್ ಗಳ ಮೇಲೆ ನಡೆಸಿದ ದಾಳಿಯ ಮಾಸ್ಟರ್ ಮೈಂಡ್ ರಾಷ್ಟ್ರೀಯ ಥೋಹೀದ್ ಜಮಾತ್ (ಎನ್ ಟಿಜೆ) ನಾಯಕ ಜಹ್ರನ್ ಹಶೀಮ್ ಗೂ ಕೊಚ್ಚಿ ನಗರಕ್ಕೂ ಸಂಬಂಧವಿರಬಹುದು ಎಂಬ ಶಂಕೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ.
ಎನ್ಐಎ ಅಧಿಕಾರಿಗಳ ತಂಡ ಪ್ರತ್ಯೇಕವಾಗಿ ಇಂದು ಬೆಳಗ್ಗೆ ಕೊಯಂಬತ್ತೂರು ನಗರ ಪೊಲೀಸರ ಸಹಾಯದಿಂದ ಆಗಮಿಸಿದರು.ಕೊಯಂಬತ್ತೂರಿನ ಪೊದನೂರು, ಉಕ್ಕಡಮ್ ಮತ್ತು ಕುನಿಯಮುತ್ತೂರುಗಳ ವಿವಿಧ ಕಡೆಗಳಲ್ಲಿ ಅಧಿಕಾರಿಗಳ ತಂಡ ಶೋಧ ನಡೆಸಿದರು. ಶಂಕಿತರ ಮನೆಗಳಲ್ಲಿ ಶೋಧ ನಡೆಸಿದರು.
ಎನ್ಐಎ ಅಧಿಕಾರಿಗಳು ಸದಾಮ್, ಅಕ್ಬರ್ ಮತ್ತು ಅಕ್ರಮ್ ಜಿಂತಾ ಅವರಿಗೆ ಸೇರಿದ ಪೊದನೂರಿನಲ್ಲಿನ ನಿವಾಸಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಯ ಜೊತೆಗೆ ಸಂಬಂಧ ಹೊಂದಿ ಶ್ರೀಲಂಕಾ ಬಾಂಬ್ ದಾಳಿ ಜೊತೆ ಸಂಪರ್ಕವಿದೆಯೇ ಎಂದು ಅಧಿಕಾರಿಗಳ ತಂಡ ಪರಿಶೀಲಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT