ದೇಶ

ರಾಜ್ಯಸಭೆ ಬಿಜೆಪಿ ಉಪನಾಯಕರಾಗಿ ಸಚಿವ ಪಿಯೂಷ್ ಗೋಯಲ್ ನೇಮಕ

Shilpa D
ನವದೆಹಲಿ: ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭಾರತೀಯ ಜನತಾ ಪಕ್ಷದ ರಾಜ್ಯಸಭೆ ಉಪನಾಯಕರನ್ನಾಗಿ ನೇಮಿಸಲಾಗಿದೆ.
ಮೋದಿ ಸರ್ಕಾರದಲ್ಲಿ ಪಿಯೂಷ್ ಗೋಯೆಲ್ ರೈಲ್ವೆ ಮತ್ತು ವಾಣಿಜ್ಯ ಮತ್ತು ಕೈಗಾರಿಕೆ ಸಚಿವರಾಗಿದ್ದಾರೆ, ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿಯ ಹಿರಿಯ ದಲಿತ ಮುಖಂಡ ತಾವರ್‌ಚಂದ್‌ ಗೆಹ್ಲೋಟ್‌ ಅವರು ರಾಜ್ಯಸಭೆಯಲ್ಲಿ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದಾರೆ. ಕಳೆದ ಅವಧಿಯಲ್ಲಿ ಸದನ ನಾಯಕರಾಗಿದ್ದ ಅರುಣ್‌ ಜೇಟ್ಲಿ ಅನಾರೋಗ್ಯದ ಕಾರಣದಿಂದ ಈ ಬಾರಿ ಸಂಪುಟ ಸೇರಿಲ್ಲ. ಹೀಗಾಗಿ ಈಗ ಅವರ ಸ್ಥಾನಕ್ಕೆ ಗೆಹ್ಲೋಟ್‌ ಅವರನ್ನು ನೇಮಕ ಮಾಡಲಾಗಿದೆ
SCROLL FOR NEXT