ಪ್ರಹ್ಲಾದ್ ಜೋಶಿ 
ದೇಶ

ಜೂನ್ 16ರಂದು ಸರ್ವಪಕ್ಷ ಸಭೆ, ಜೂನ್ 17ರಿಂದ ಸಂಸತ್ತಿನ ಮುಂಗಾರು ಅಧಿವೇಶನ: ಪ್ರಹ್ಲಾದ್ ಜೋಶಿ

ಸಂಸತ್ತಿನ ಮುಂಗಾರು ಅಧಿವೇಶನ ಇದೇ 17ರಿಂದ ಆರಂಭವಾಗುತ್ತಿದ್ದು, ಅದಕ್ಕಿಂತ ಒಂದು ದಿನ ಮೊದಲು ಅಂದರೆ 16ರಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಇದೇ 17ರಿಂದ ಆರಂಭವಾಗುತ್ತಿದ್ದು, ಅದಕ್ಕಿಂತ ಒಂದು ದಿನ ಮೊದಲು ಅಂದರೆ 16ರಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ. ಹೊಸ ಸರ್ಕಾರದ ಮೊದಲ ಅಧಿವೇಶನ ಜೂನ್ 17ರಿಂದ ಜುಲೈ 26ರವರೆಗೆ ನಡೆಯಲಿದೆ.ಮೊದಲ ಬಜೆಟ್ ಜುಲೈ 5ರಂದು ಮಂಡನೆಯಾಗಲಿದೆ.
ಜೂನ್ 16ರಂದು ಭಾನುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಜೂನ್ 16ರಂದು ಸಂಜೆ ಸಂಸತ್ತಿನಲ್ಲಿ ಬಿಜೆಪಿ ಸಂಸದೀಯ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು ಸದನ ಕಾರ್ಯತಂತ್ರಗಳ ಕುರಿತು ಎನ್ ಡಿಎ ಮೈತ್ರಿಕೂಟ ಚರ್ಚೆ ನಡೆಸಲಿದೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದ ಮೇಲೆ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು ಈ ಅಧಿವೇಶನದಲ್ಲಿ ತ್ರಿವಳಿ ತಲಾಖ್, ಆಧಾರ್ ತಿದ್ದುಪಡಿ, ಕಂಪೆನಿ ಕಾಯ್ದೆ ತಿದ್ದುಪಡಿ ಮತ್ತು ಭಾರತೀಯ ವೈದ್ಯಕೀಯ ಮಂಡಳಿ ಕಾಯ್ದೆಗಳು ಸೇರಿದಂತೆ 10 ಹೊಸ ವಿಧೇಯಕಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.
ಈ ಮಧ್ಯೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವರುಗಳಾದ ನರೇಂದ್ರ ಸಿಂಗ್ ತೊಮರ್, ಅರ್ಜುನ್ ರಾಮ್ ಮೆಘವಾಲ್ ಅವರು ನಿನ್ನೆ ದೆಹಲಿಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಸಂಸತ್ತಿನ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಕೋರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ; Video

ಆಜ್ ತಕ್ ನಿರೂಪಕನ ವಿರುದ್ಧ ದ್ವೇಷ ಭಾಷಣ ಆರೋಪ: ಎಫ್‌ಐಆರ್ ದಾಖಲಿಸಲು UP ನ್ಯಾಯಾಲಯ ಆದೇಶ

Amruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ? ಮಹಾ ಸಿಎಂ 'ಫಡ್ನವೀಸ್ ಪತ್ನಿ' ವಿರುದ್ಧ ನೆಟ್ಟಿಗರ ಆಕ್ರೋಶ, Video ವೈರಲ್

ಅಕ್ರಮ ಬೆಟ್ಟಿಂಗ್ ಪ್ರಕರಣ: ವೀರೇಂದ್ರ ಪಪ್ಪಿ ಚಿನ್ನದ ಖಜಾನೆ ಕಂಡು ED ಶಾಕ್; 21 ಕೆಜಿ ಗೋಲ್ಡ್ ಬಿಸ್ಕೇಟ್ ಜಪ್ತಿ

SCROLL FOR NEXT