ಗುಜರಾತ್ ನಲ್ಲಿ ವಾಯು ಚಂಡಮಾರುತ ಅಬ್ಬರ 
ದೇಶ

ಪಥ ಬದಲಿಸಿದ ವಾಯು ಚಂಡಮಾರುತ, ಭಾರಿ ಮಳೆ ಸಾಧ್ಯತೆ

ಗುಜರಾತ್ ನಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿದ್ದ ವಾಯು ಚಂಡಮಾರುತ ರಾತ್ರೋ ರಾತ್ರಿ ತನ್ನ ಪಥ ಬದಲಿಸಿದ್ದು, ಗುಜರಾತ್ ಕರಾವಳಿಯಕ್ಕ ಧಾವಿಸುತ್ತಿದ್ದ ಚಂಡಮಾರುತ ಇದೀಗ ಸಮುದ್ರದತ್ತ ತಿರುಗಿದೆ.

ಅಹ್ಮದಾಬಾದ್: ಗುಜರಾತ್ ನಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿದ್ದ ವಾಯು ಚಂಡಮಾರುತ ರಾತ್ರೋ ರಾತ್ರಿ ತನ್ನ ಪಥ ಬದಲಿಸಿದ್ದು, ಗುಜರಾತ್ ಕರಾವಳಿಯಕ್ಕ ಧಾವಿಸುತ್ತಿದ್ದ ಚಂಡಮಾರುತ ಇದೀಗ ಸಮುದ್ರದತ್ತ ತಿರುಗಿದೆ.
ಚಂಡಮಾರುತ ಬದಲಿಸಿದೆಯಾದರೂ ಅದರ ಪರಿಣಾಮ ಗುಜರಾತ್ ಕರಾವಳಿ ಪ್ರದೇಶಗಳ ಮೇಲಾಗುತ್ತಿದ್ದು, ಗುಜರಾತ್ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಪ್ರಸ್ತುತ ವೆರವಲ್ ನ ಜಲೇಶ್ವರ್ ನಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುತ್ತಿದ್ದು, ವಾಯು ಚಂಡಮಾರುತ ಪೋರ್ ಬಂದರ್ ಮತ್ತು ಮಹುವಾ ಬೀಚ್ ಗಳ ನಡುವೆ ಹಾದುಹೋಗಲಿದೆ ಎನ್ನಲಾಗಿದೆ. ಹೀಗಾಗಿ ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ಏಳುತ್ತಿದ್ದು, ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಗಿರ್ ಸೋಮನಾಥ್ ಜಿಲ್ಲೆಯಲ್ಲಿ ಸೋಮನಾಥ ದೇಗುಲದ ಅವರಣದಲ್ಲಿದ್ದ ಶೆಡ್ ಗಳ ಮೇಲ್ಛಾವಣಿಗಳು ಗಾಳಿಯ ವೇಗಕ್ಕೆ ಹಾರಿ ಹೋಗಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವುಗಳಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಗುಜರಾತ್ ಕರಾವಳಿಯಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಅಲ್ಲದೆ ತುರ್ತು ಕ್ರಮವಾಗಿ ಗಂಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅಗತ್ಯ ಪ್ರಮಾಣದ ಆಹಾರ ಪೊಟ್ಟಣಗಳನ್ನು ಸಿದ್ಧಪಡಿಸಿಟ್ಟುಕೊಳ್ಳಲಾಗಿದೆ.
ಉಳಿದಂತೆ ಸೌರಾಷ್ಟ್ರ, ಅಮ್ರೇಲಿ, ಗಿರ್ ಸೋಮನಾಥ್, ಡಿಯು, ಜುನಾಘಡ್, ಪೋರ್ ಬಂದರ್, ರಾಜ್ ಕೋಟ್, ದ್ವಾರಕಾ, ದೇವ್ ಭೂಮಿ, ಕಚ್ ಮತ್ತು ಮಹುವಾದಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಇಲ್ಲಿ ಪ್ರತೀ ಗಂಟೆಗೆ 155-165 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ವಾಯು ಚಂಡಮಾರುತ ಹಾದುಹೋಗುವ ಸಂದರ್ಭದಲ್ಲಿ ಇದರ ವೇಗ ಪ್ರತೀ ಗಂಟೆಗೆ 180 ಕಿಮೀ ದಾಟಲಿದೆ ಎನ್ನಲಾಗಿದೆ.
ಗುಜರಾತ್ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಅಲ್ಲದೆ ಕರ್ನಾಟಕದಲ್ಲೂ ವಾಯು ಚಂಡಮಾರುತ ಪರಿಣಾಮ ಉಂಟಾಗಿದ್ದು, ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಉಚಿತ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

‘ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ’: ಹಿಂದು-ಮುಸ್ಲಿಂ ಒಗ್ಗಟ್ಟಿಗೆ ಅಠಾವಳೆ ಕರೆ, ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ವಿರೋಧ..!

ಬರದನಾಡು ಚಿತ್ರದುರ್ಗಕ್ಕೆ ಐತಿಹಾಸಿಕ ಕ್ಷಣ; ಗೊನೂರು ಕೆರೆ ತಲುಪಿದ ಭದ್ರಾ ಮೇಲ್ದಂಡೆ ಯೋಜನೆಯ ನೀರು, Video

ರೇಣುಕಾಸ್ವಾಮಿ ಪ್ರಕರಣದ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ; ಫಾರ್ಮ್‌ಹೌಸ್ ಪಕ್ಷಿ ವಿವಾದದಲ್ಲಿ ಕೋರ್ಟ್‌ನಿಂದ ಸಮನ್ಸ್ ಜಾರಿ

BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್‌ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!