ದೇಶವಿಡೀ ವಿದ್ಯುತೀಕರಣಗೊಂಡರೂ ಈ ಗ್ರಾಮಕ್ಕೆ 71 ವರ್ಷಗಳಿಂದ ವಿದ್ಯುತ್ ಸಂಪರ್ಕವೇ ಇಲ್ಲ! 
ದೇಶ

ದೇಶವಿಡೀ ವಿದ್ಯುತೀಕರಣಗೊಂಡರೂ ಈ ಗ್ರಾಮಕ್ಕೆ 71 ವರ್ಷಗಳಿಂದ ವಿದ್ಯುತ್ ಸಂಪರ್ಕವೇ ಇಲ್ಲ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ-1 ಸರ್ಕಾರದ ದೇಶಾದ್ಯಂತ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಯಶಸ್ವಿಯಾಗಿದೆ ಎಂದು ಹೇಳಿತ್ತು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ-1 ಸರ್ಕಾರದ ದೇಶಾದ್ಯಂತ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಯಶಸ್ವಿಯಾಗಿದೆ ಎಂದು ಹೇಳಿತ್ತು.
ಆದರೆ ಬಲ್ ರಾಮ್ ಪುರ ಜಿಲ್ಲೆಯ ತ್ರಿಶೂಲಿ ಗ್ರಾಮಸ್ಥರು ಕಳೆದ 7 ದಶಕಗಳಿಂದ ಕತ್ತಲೆಯಲ್ಲೇ ಜೀವನ ಕಳೆಯುತ್ತಿದ್ದಾರೆ. ಈ ಗ್ರಾಮದಲ್ಲಿ ವಿದ್ಯುತ್ ಕಂಬಗಳಿದ್ದರೂ ಸಹ ಕತ್ತಲೆಯಲ್ಲೇ ಜೀವನ ಕಳೆಯುವಂತಾಗಿದೆ ಎಂಬುದು ಇಲ್ಲಿನ ಜನರ ಅಳಲಾಗಿದೆ. 
ತ್ರಿಶೂಲಿ ಗ್ರಾಮದಲ್ಲಿ 100 ಮನೆಗಳಿದ್ದು, ಜಿಲ್ಲಾಧಿಕಾರಿಗಳಿಗೆ ವಿದ್ಯುತ್ ಪೂರೈಕೆ ಕುರಿತಂತೆ ಪತ್ರ ಬರೆದಿದ್ದಾರೆ. ಈಗಲೂ ಈ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಲಾಟೀನು ದೀಪವೇ ಆಧಾರ ಎಂದರೆ ನೀವು ನಂಬಬೇಕು. ಲಾಟೀನು ದೀಪ ಉರಿಸುವುದಕ್ಕೂ ಸೀಮೆ ಎಣ್ಣೆ ಪೂರೈಕೆ ಕೊರತೆ ಉಂಟಾಗಿದ್ದು, ಕೆಲವೊಮ್ಮೆ ಕಟ್ಟಿಗೆಯಿಂದ ದೀಪ ಉರಿಸಲಾಗುತ್ತದೆ ಎಂದು ಗ್ರಾಮದ ಹಿರಿಯ ವ್ಯಕ್ತಿ ರಾಮೇಶ್ವರ್ ಪಾಲ್ ಹೇಳಿದ್ದಾರೆ. 
ಈ ಹಿಂದೆ ಬಲ್ ರಾಮ್ ಪುರ ಜಿಲ್ಲೆಯ ಜನತೆ ನೀರಿನ ಕೊರತೆ ಬಗ್ಗೆಯೂ ದೂರು ನೀಡಿದ್ದರು. ಒಂದು ಗ್ರಾಮದ ಶೇ.10 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕವಿದ್ದು, ಶಾಲೆ, ಪಂಚಾಯತ್ ಕಚೇರಿ, ಆರೊಗ್ಯ ಕೇಂದ್ರ, ಸಮುದಾಯ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕವಿದ್ದರೆ ಅಂತಹ ಗ್ರಾಮವನ್ನು ವಿದ್ಯುತೀಕರಣಗೊಂಡ ಗ್ರಾಮವೆಂದು ಪರಿಗಣಿಸಲಾಗುತ್ತದೆ. ಹೀಗಾಗಿಯೇ ಶೇ.100 ರಷ್ಟಿ ವಿದ್ಯುತ್ ಸಂಪರ್ಕ ಗುರಿಯನ್ನು ದಾಟಿದ್ದರೂ ಈ  ವರೆಗೂ 31 ಮಿಲಿಯನ್ ಮನೆಗಳಿಗೆ ವಿದ್ಯುತ್ ಸಂಪರ್ಕ ದೊರೆತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT