ದೇಶವಿಡೀ ವಿದ್ಯುತೀಕರಣಗೊಂಡರೂ ಈ ಗ್ರಾಮಕ್ಕೆ 71 ವರ್ಷಗಳಿಂದ ವಿದ್ಯುತ್ ಸಂಪರ್ಕವೇ ಇಲ್ಲ! 
ದೇಶ

ದೇಶವಿಡೀ ವಿದ್ಯುತೀಕರಣಗೊಂಡರೂ ಈ ಗ್ರಾಮಕ್ಕೆ 71 ವರ್ಷಗಳಿಂದ ವಿದ್ಯುತ್ ಸಂಪರ್ಕವೇ ಇಲ್ಲ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ-1 ಸರ್ಕಾರದ ದೇಶಾದ್ಯಂತ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಯಶಸ್ವಿಯಾಗಿದೆ ಎಂದು ಹೇಳಿತ್ತು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ-1 ಸರ್ಕಾರದ ದೇಶಾದ್ಯಂತ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಯಶಸ್ವಿಯಾಗಿದೆ ಎಂದು ಹೇಳಿತ್ತು.
ಆದರೆ ಬಲ್ ರಾಮ್ ಪುರ ಜಿಲ್ಲೆಯ ತ್ರಿಶೂಲಿ ಗ್ರಾಮಸ್ಥರು ಕಳೆದ 7 ದಶಕಗಳಿಂದ ಕತ್ತಲೆಯಲ್ಲೇ ಜೀವನ ಕಳೆಯುತ್ತಿದ್ದಾರೆ. ಈ ಗ್ರಾಮದಲ್ಲಿ ವಿದ್ಯುತ್ ಕಂಬಗಳಿದ್ದರೂ ಸಹ ಕತ್ತಲೆಯಲ್ಲೇ ಜೀವನ ಕಳೆಯುವಂತಾಗಿದೆ ಎಂಬುದು ಇಲ್ಲಿನ ಜನರ ಅಳಲಾಗಿದೆ. 
ತ್ರಿಶೂಲಿ ಗ್ರಾಮದಲ್ಲಿ 100 ಮನೆಗಳಿದ್ದು, ಜಿಲ್ಲಾಧಿಕಾರಿಗಳಿಗೆ ವಿದ್ಯುತ್ ಪೂರೈಕೆ ಕುರಿತಂತೆ ಪತ್ರ ಬರೆದಿದ್ದಾರೆ. ಈಗಲೂ ಈ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಲಾಟೀನು ದೀಪವೇ ಆಧಾರ ಎಂದರೆ ನೀವು ನಂಬಬೇಕು. ಲಾಟೀನು ದೀಪ ಉರಿಸುವುದಕ್ಕೂ ಸೀಮೆ ಎಣ್ಣೆ ಪೂರೈಕೆ ಕೊರತೆ ಉಂಟಾಗಿದ್ದು, ಕೆಲವೊಮ್ಮೆ ಕಟ್ಟಿಗೆಯಿಂದ ದೀಪ ಉರಿಸಲಾಗುತ್ತದೆ ಎಂದು ಗ್ರಾಮದ ಹಿರಿಯ ವ್ಯಕ್ತಿ ರಾಮೇಶ್ವರ್ ಪಾಲ್ ಹೇಳಿದ್ದಾರೆ. 
ಈ ಹಿಂದೆ ಬಲ್ ರಾಮ್ ಪುರ ಜಿಲ್ಲೆಯ ಜನತೆ ನೀರಿನ ಕೊರತೆ ಬಗ್ಗೆಯೂ ದೂರು ನೀಡಿದ್ದರು. ಒಂದು ಗ್ರಾಮದ ಶೇ.10 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕವಿದ್ದು, ಶಾಲೆ, ಪಂಚಾಯತ್ ಕಚೇರಿ, ಆರೊಗ್ಯ ಕೇಂದ್ರ, ಸಮುದಾಯ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕವಿದ್ದರೆ ಅಂತಹ ಗ್ರಾಮವನ್ನು ವಿದ್ಯುತೀಕರಣಗೊಂಡ ಗ್ರಾಮವೆಂದು ಪರಿಗಣಿಸಲಾಗುತ್ತದೆ. ಹೀಗಾಗಿಯೇ ಶೇ.100 ರಷ್ಟಿ ವಿದ್ಯುತ್ ಸಂಪರ್ಕ ಗುರಿಯನ್ನು ದಾಟಿದ್ದರೂ ಈ  ವರೆಗೂ 31 ಮಿಲಿಯನ್ ಮನೆಗಳಿಗೆ ವಿದ್ಯುತ್ ಸಂಪರ್ಕ ದೊರೆತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT