ರಣ್ ದೀಪ್ ಸಿಂಗ್ ಸುರ್ಜೆವಾಲಾ 
ದೇಶ

ಉತ್ತರಪ್ರದೇಶ ಕಾನೂನು ಸುವ್ಯವಸ್ಥೆಗೂ ಜಂಗಲ್ ರಾಜ್ ಗೂ ಯಾವುದೇ ವ್ಯತ್ಯಾಸವಿಲ್ಲ: ಕಾಂಗ್ರೆಸ್

ಉತ್ತರ ಪ್ರದೇಶ ಸರ್ಕಾರದ ಕಾನೂನು ಸುವ್ಯವಸ್ಥೆಗೂ ಹಾಗೂ ಜಂಗಲ್ ರಾಜ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ....

ನವದೆಹಲಿ: ಉತ್ತರ ಪ್ರದೇಶ ಸರ್ಕಾರದ ಕಾನೂನು ಸುವ್ಯವಸ್ಥೆಗೂ ಹಾಗೂ ಜಂಗಲ್ ರಾಜ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶ ಬಾರ್ ಕೌನ್ಸಿಲ್ ನ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿದ್ದ ದರ್ವೇಶ್ ಯಾದವ್ ತಮ್ಮ ಸಹೋದ್ಯೋಗಿಯ ಗುಂಡೇಟಿಗೆ ಬಲಿಯಾಗಿದ್ದಾರೆ.
ಆಗ್ರಾ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಘಟನೆಯಲ್ಲಿ ಅಡ್ವೋಕೇಟ್ ಅರವಿಂದ್ ಕುಮಾರ್ ಮಿಶ್ರಾ ಅವರ ಕೋಣೆಯಲ್ಲಿ ಯಾದವ್  ಮೇಲೆ ಮೂರು ಸುತ್ತು ಗುಂಡಿನ ದಾಳಿ ನಡೆದಿತ್ತು.
ಇನ್ನು ಮಿಶ್ರಾ ಮೇಲೆ ಗುಂಡು ಹಾರಿಸಿ ಹತ್ಯೆಗೈದ ಆರೋಪಿ ಅಡ್ವೋಕೇಟ್ ಮನೀಶ್ ಶರ್ಮಾ ತಾವೂ ಸ್ವಯಂ ಗುಂಡು ಹಾರಿಸಿಕೊಂಡಿದ್ದಾರೆ. ಆರೋಪಿ ಶರ್ಮಾ ಸ್ಥಿತಿ ಈಗ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಕೇವಲ ಎರಡು ದಿನಗಳ ಹಿಂದಷ್ತೇ ದರ್ವೇಶ್ ಯಾದವ್ ಬಾರ್ ಕೌನ್ಸಿಲ್ ಹುದ್ದೆಗೆ ಆಯ್ಕೆಯಾಗಿದ್ದರು. 
ಉತ್ತರ ಪ್ರದೇಶ ಸರ್ಕಾರದ ಕಾನೂನು ಸುವ್ಯವಸ್ಥೆಗೂ ಹಾಗೂ ಜಂಗಲ್ ರಾಜ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT