ಎ. ಕೆ. ಆಂಟನಿ 
ದೇಶ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಂಟನಿ ನಿರಾಸಕ್ತಿ, ಕಾರ್ಯಾಧ್ಯಕ್ಷ ಸ್ಥಾನ ಒಲ್ಲೇ ಎಂದ ವೇಣುಗೋಪಾಲ್

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ವಿಮುಖವಾಗಲು ಪಟ್ಟು ಹಿಡಿದಿದ್ದು, ಆ ಸ್ಥಾನವನ್ನು ವಹಿಸಿಕೊಳ್ಳಲು ಹಿರಿಯ ಕಾಂಗ್ರೆಸ್ ಮುಖಂಡ ಎ. ಕೆ. ಆಂಟನಿ ನಿರಾಕರಿಸಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಹುಲ್ ಗಾಂಧಿ  ಎಐಸಿಸಿ ಅಧ್ಯಕ್ಷ ಸ್ಥಾನದಿಂದ ವಿಮುಖವಾಗಲು ಪಟ್ಟು ಹಿಡಿದಿದ್ದು, ಆ ಸ್ಥಾನವನ್ನು ವಹಿಸಿಕೊಳ್ಳಲು  ಹಿರಿಯ ಕಾಂಗ್ರೆಸ್ ಮುಖಂಡ ಎ. ಕೆ. ಆಂಟನಿ ನಿರಾಕರಿಸಿದ್ದಾರೆ.
ಅನಾರೋಗ್ಯದ ಕಾರಣದಿಂದಾಗಿ ಎಐಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ರಕ್ಷಣಾ ಸಚಿವ ಹಾಗೂ ಗಾಂಧಿ ಕುಟುಂಬದ ನಂಬಿಕಸ್ತರು ಆಗಿರುವ ಎ. ಕೆ. ಆಂಟನಿ ಹೇಳಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಇದಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಕೂಡಾ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಗಾಂಧಿ ಕುಟುಂಬದ ಹೊರಗಿನವರನ್ನು ತರಲು ಹಿರಿಯ ಕಾಂಗ್ರೆಸ್ ಮುಖಂಡರಾದ ಅಹ್ಮದ್ ಪಟೇಲ್ ಹಾಗೂ ಗುಲಾಂ ನಬಿ ಅಜಾದ್  ಯೋಚಿಸುತ್ತಿದ್ದಾರೆ.  
ಗಾಂಧಿ ಕುಟುಂಬದ ಬಗ್ಗೆ ಅಪಾರ ಗೌರವಿದೆ. ಆದರೆ, ಎಐಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದಿಲ್ಲ ಎಂದು ಎ. ಕೆ. ಆಂಟನಿ ಅಹ್ಮದ್ ಪಟೇಲ್ ಹಾಗೂ ಗುಲಾಂ ನಬಿ ಅಜಾದ್ ಅವರಿಗೆ ತಿಳಿಸಿದ್ದಾರೆ. ಮತ್ತೊಂದೆಡೆ ಎಐಸಿಸಿ  ಕಾರ್ಯಾಧ್ಯಕ್ಷ ಸ್ಥಾನ ನಿರ್ವಹಿಸಲು ಕೆ. ಸಿ. ವೇಣುಗೋಪಾಲ್ ನಿರಾಕರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆದಾಗ್ಯೂ, ಕಾಂಗ್ರೆಸ್ ಕಾರ್ಯಾಕಾರಿ ಸಮಿತಿ, ರಾಹುಲ್ ಗಾಂಧಿ ರಾಜೀನಾಮೆಯನ್ನು ತಿರಸ್ಕರಿಸಿದ್ದು, ಅದೇ ಹುದ್ದೆಯಲ್ಲಿ ಮುಂದುವರೆಯುವಂತೆ ನಿರ್ಧಾರ ತೆಗೆದುಕೊಂಡಿದೆ. ಈಗ ಉತ್ತರ ಭಾರತದಲ್ಲಿ ಪಕ್ಷವನ್ನು ಮುನ್ನಡೆಸುವ ನಾಯಕನತ್ತ ಪಕ್ಷ  ಎದುರು ನೋಡುತ್ತಿದೆ . ಅನೇಕ ಹಿರಿಯ ನಾಯಕರನ್ನು ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸುವ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT