ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ 
ದೇಶ

ಬ್ಯಾಂಕ್ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಿಎಂ ಮನವಿ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ...

ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಭಾಷಾ ಜ್ಞಾನ ಹೊಂದಿರುವ ಸ್ಥಳೀಯರಿಗೆ ಅವಕಾಶ ಒದಗಿಸುವಂತೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ (ಐಬಿಪಿಎಸ್) ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಮನವಿ ಮಾಡಿದರು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳು ಸಂವಿಧಾನ ಮಾನ್ಯತೆ ನೀಡಿರುವ ಎಲ್ಲ 22 ಭಾಷೆಗಳಲ್ಲಿ ನಡೆಸಬೇಕು ಹಾಗೂ ಕೇಂದ್ರ ಸರ್ಕಾರದ ಎಲ್ಲ ಇಲಾಖೆಗಳ ನೇಮಕಾತಿಯಲ್ಲೂ ಸ್ಥಳೀಯರಿಗೆ ಅವಕಾಶ ಒದಗಿಸುವ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಮನವಿ ಮಾಡಿದರು.
ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಿಗೆ 2018-19ನೇ ಸಾಲಿಗೆ ಬಾಕಿ ಇರುವ 233 ಕೋಟಿ ರೂಪಾಯಿ ಪರ್‍ಫಾರ್ಮೆನ್ಸ್ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಸ್ಥೆಯಾಗಿದೆ. ಈ ಸಂಸ್ಥೆಯ ಬ್ಯಾಂಕ್ ಖಾತೆಯಲ್ಲಿರುವ ಮೊತ್ತ ಹಾಗೂ ಬಡ್ಡಿ ಮೊತ್ತವನ್ನು ಕಾರ್ಮಿಕರ ಕಲ್ಯಾಣಕ್ಕಾಗಿ ವಿನಿಯೋಗಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಕಾಯ್ದೆ 1961 ರ ನಿಯಮ 10(29ಎ) ಅಡಿ ಮಂಡಳಿಯನ್ನು ಸೇರ್ಪಡೆಗೊಳಿಸಿ, ಕಾಫಿ ಮಂಡಳಿ, ರಬ್ಬರ್ ಮಂಡಳಿಗಳಂತೆ, ಆದಾಯ ತೆರಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿದರು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯವು ಅತ್ಯುತ್ತಮ ಸಾಧನೆ ಮಾಡಿದ್ದು, ಕೇಂದ್ರದಿಂದ ಕೂಲಿ ಮುಂಗಡವೂ ಸೇರಿದಂತೆ ಸುಮಾರು 1,500 ಕೋಟಿ ರೂಪಾಯಿ ಬಿಡುಗಡೆಯಾಗಬೇಕಿದೆ. ಈ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಸಚಿವೆಗೆ ಮನವಿ ಮಾಡಿದರು.
ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾಕ್ಟರ್ ಇ.ವಿ. ರಮಣ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT