ಸಾಂದರ್ಭಿಕ ಚಿತ್ರ 
ದೇಶ

ವಡೋದರ: ಹೊಟೆಲ್ ಒಳಚರಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ 7 ಮಂದಿ ಸಾವು!

ಗುಜರಾತ್ ನ ವಡೋದರಾದಲ್ಲಿ ಭೀಕರ ಒಳಚರಂಡಿ ದುರಂತ ಸಂಭವಿಸಿದ್ದು, ಸ್ವಚ್ಛತೆ ವೇಳೆ ಉಸಿರುಗಟ್ಟಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಡೋದರ: ಗುಜರಾತ್ ನ ವಡೋದರಾದಲ್ಲಿ ಭೀಕರ ಒಳಚರಂಡಿ ದುರಂತ ಸಂಭವಿಸಿದ್ದು, ಸ್ವಚ್ಛತೆ ವೇಳೆ ಉಸಿರುಗಟ್ಟಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ವಡೋದರಾದ ದಭೋಯ್ ತೆಹ್ಸಿಲ್ ನ ಫರ್ತಿಕುಯ್ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಕಳೆದ 3 ದಿನಗಳಿಂದ ಇಲ್ಲಿನ ಹೊಟೆಲ್ ನ ಒಳಚರಂಡಿ ಕಟ್ಟಿಕೊಂಡಿತ್ತು. ಇದರ ಸ್ವಚ್ಛತೆಗಾಗಿ ನಾಲ್ಕು ಮಂದಿ ಕಾರ್ಮಿಕರು ಆಗಮಿಸಿದ್ದರು. ಒಳಚರಂಡಿ ಒಳಗೆ ಇಳಿದಿದ್ದ ನಾಲ್ಕು ಮಂದಿ ಕಾರ್ಮಿಕರು ಸುಮಾರು ಗಂಟೆಗಳೇ ಕಳೆದರೂ ಹೊರಗೆ ಬರಲಿಲ್ಲ. ಅನುಮಾನಗೊಂಡ ಹೊಟೆಲ್ ನ ಮೂವರು ಸಿಬ್ಬಂದಿಗಳು ಒಳಚರಂಡಿ ಒಳಗೆ ಇಳಿದಿದ್ದು, ಆಗ ಅವರೂ ಕೂಡ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಪ್ರಸ್ತುತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಈ ದುರಂತದ ಬಗ್ಗೆ ಜಿಲ್ಲಾಧಿಕಾರಿ ಕಿರಣ್ ಜವೇರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸ್ವಚ್ಛತೆಗಾಗಿ ಚರಂಡಿಯೊಳಗೆ ಇಳಿದಿದ್ದ ಕಾರ್ಮಿಕರು ಕುಸಿದಿದ್ದು, ಈ ವೇಳೆ ಅವರನ್ನು ರಕ್ಷಿಸಲು ಹೊಟೆಲ್ ಕಾರ್ಮಿಕರು ಕೂಡ ಚರಂಡಿಯೊಳಗೆ ಇಳಿದಿದ್ದಾರೆ. ಆಗ ಅವರೂ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT