ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವಂಚನೆ ಪ್ರಕರಣಗಳನ್ನು ಎದುರಿಸುತ್ತಿರುವ ಬಿಲ್ಡರ್ ಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ಸಂದೇಶ ರವಾನೆ ಮಾಡಿದ್ದಾರೆ.
ಗೌತಮ್ ಬುದ್ಧ ನಗರ್ ನಲ್ಲಿ ತಪಾಸಣೆ ನಡೆಸಿದ ಬಳಿಕ ಮೂವರು ಸರ್ಕಾರಿ ಅಧಿಕಾರಿಗಳ ಜೊತೆಯಲ್ಲಿ ಬಿಲ್ಡರ್ ಗಳ ಜೊತೆ ಸಭೆ ನಡೆಸಿರುವ ಸಿಎಂ ಯೋಗಿ ಆದಿತ್ಯನಾಥ್, ನೀಡಿರುವ ಭರವಸೆಗಳನ್ನು ಉಳಿಸಿಕೊಳ್ಳಿ ಇಲ್ಲವೇ ಪರಿಣಾಮ ಎದುರಿಸಲು ಸಿದ್ಧರಾಗಿ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ನೋಯ್ಡಾ ಪ್ರಾಧಿಕಾರ, ಗ್ರೇಟರ್ ನೋಯ್ಡಾ ಪ್ರಾಧಿಕಾರ, ಯಮುನಾ ಎಕ್ಸ್ ಪ್ರೆಸ್ ಪ್ರಾಧಿಕಾರದ ಕಾರ್ಯ ನಿರ್ವಹಣೆಯ ತಪಾಸಣೆಗಾಗಿ ಯೋಗಿ ಆದಿತ್ಯನಾತ್ ಭೇಟಿ ನೀಡಿದ್ದರು. ಈ ವೇಳೆ 20 ಪ್ರಭಾವಿ ಸುಸ್ತಿದಾರ ಬಿಲ್ಡರ್ ಗಳು ಸಭೆಯಲ್ಲಿ ಭಾಗಿಯಾಗಿದ್ದರು. ಪಾವತಿ ಮಾಡಬೇಕಿರುವ ಬಾಕಿ ಮೊತ್ತವನ್ನು ನೀಡಿ, ಯೋಜನೆಗಳನ್ನು ಪೂರ್ಣಗೊಳಿಸಲು ಬಿಲ್ಡರ್ ಗಳಿಗೆ ಸೂಚನೆ ನೀಡಲಾಗಿದೆ.
ಮನೆ ಖರೀದಿಗೆ ಮುಂದಾಗಿರುವವರಿಗೆ ಶೀಘ್ರವೇ ಫ್ಲ್ಯಾಟ್ ಗಳನ್ನು ಹಸ್ತಾಂತರಿಸಬೇಕೆಂದು ಯೋಗಿ ಆದಿತ್ಯನಾಥ್ ಈ ಸಭೆಯಲ್ಲಿ ಸೂಚನೆ ನೀಡಿದ್ದಾರೆ.