ಸಾಂದರ್ಭಿಕ ಚಿತ್ರ 
ದೇಶ

ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಗಳ ಜಾಹೀರಾತು ನಿಷೇಧಿಸಿ: ಎಫ್ಎಸ್ಎಸ್ಎಐ

ಅನಾರೋಗ್ಯಕರ ಆಹಾರಗಳ ಜಾಹೀರಾತುಗಳನ್ನು ಶಾಲಾ ಆವರಣದ ಸುತ್ತಮುತ್ತ ಪ್ರಚಾರ ...

ನವದೆಹಲಿ: ಅನಾರೋಗ್ಯಕರ ಜಂಕ್ ಫುಡ್  ಜಾಹೀರಾತುಗಳನ್ನು ಶಾಲಾ ಆವರಣದ ಸುತ್ತಮುತ್ತ ಪ್ರಚಾರ ಮಾಡಬಾರದು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಶಿಫಾರಸು ಮಾಡಿದೆ.
ಶಾಲಾ ಮಕ್ಕಳಿಗೆ ಗುಣಮಟ್ಟದ ಆರೋಗ್ಯಯುತ ಆಹಾರ ನೀಡಬೇಕು ಎಂದು ಪ್ರೋತ್ಸಾಹಿಸುವ ದೃಷ್ಟಿಯಿಂದ ಅನಾರೋಗ್ಯಕರ ಜಾಹೀರಾತುಗಳನ್ನು ಪ್ರದರ್ಶಿಸಬಾರದು ಎಂದು ಹೇಳಿದೆ.
ಎಫ್ಎಸ್ಎಸ್ಐಯ ಮುಖ್ಯ ಕಾರ್ಯಕಾರಿ ಅಧಿಕಾರಿ ಪವನ್ ಕುಮಾರ್ ಅಗರ್ವಾಲ್, ಈ ಕುರಿತು ಕರಡು ವರದಿ ತಯಾರಿಸಲಾಗಿದ್ದು ಶಾಲೆಗಳಲ್ಲಿ ಮಕ್ಕಳಿಗೆ ಪೌಷ್ಠಿಕಾಂಶಭರಿತ ಪೂರ್ಣಪ್ರಮಾಣದ ಆಹಾರವನ್ನು ನೀಡಬೇಕಾಗದ ಕುರಿತು ವರದಿಯನ್ನು ಆರೋಗ್ಯ ಸಚಿವಾಲಯಕ್ಕೆ ಅನುಮೋದನೆಗೆ ಕಳುಹಿಸಲಾಗಿದೆ ಎಂದರು. 
ಶಾಲಾ ಆವರಣದ ಸುತ್ತಮುತ್ತ 50 ಮೀಟರ್ ಸರಹದ್ದಿನಲ್ಲಿ ಅನಾರೋಗ್ಯಕರ ಆಹಾರಗಳಿಗೆ ಸಂಬಂಧಪಟ್ಟ ಜಾಹೀರಾತುಗಳನ್ನು ಪ್ರಚಾರ ಮಾಡಬಾರದು ಎಂದು ನಾವು ಪ್ರಸ್ತಾಪ ಸಲ್ಲಿಸಿದ್ದೇವೆ. 2015ರಲ್ಲಿ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಶಾಲಾ ಆವರಣ ಸುತ್ತಮುತ್ತ ಎಂತಹ ಆಹಾರಗಳ ಜಾಹೀರಾತುಗಳನ್ನು ಪ್ರಚಾರ ಮಾಡಬೇಕೆಂದು ಆಹಾರ ಪ್ರಾಧಿಕಾರಿಗಳು ನಿಯಮ ಹೊರಡಿಸಬೇಕು ಎಂದು ಹೇಳಿತ್ತು. ಅದನ್ನು ಆಹಾರ ನಿಯಂತ್ರಣ ಪ್ರಾಧಿಕಾರ ಮುಂದುವರಿಸಲು ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT