ಸಂಗ್ರಹ ಚಿತ್ರ 
ದೇಶ

ಬಿಹಾರ: ಎನ್ಸಿಫಾಲಿಟಿಸ್ ಸೋಂಕಿಗೆ 84 ಬಲಿ, 4 ಲಕ್ಷ ಪರಿಹಾರ ಘೋಷಿಸಿದ ಸಿಎಂ ನಿತೀಶ್ ಕುಮಾರ್!

ಬಿಹಾರದಲ್ಲಿ ಎನ್ಸಿಫಾಲಿಟಿಸ್ ಸೋಂಕು ವ್ಯಾಪಕವಾಗಿದ್ದು, ಸೋಂಕಿಗೆ ಬಲಿಯಾದ ಮಕ್ಕಳ ಸಂಖ್ಯೆ 84ಕ್ಕೆ ಏರಿಕೆಯಾಗಿದೆ. ಅಂತೆಯೇ ಸಿಎಂ ನಿತೀಶ್ ಕುಮಾರ್ ಸಾವನ್ನಪ್ಪಿದ ಮಕ್ಕಳ ಕುಟುಂಕ್ಕೆ ನಾಲ್ಕು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಪಾಟ್ನಾ: ಬಿಹಾರದಲ್ಲಿ ಎನ್ಸಿಫಾಲಿಟಿಸ್ ಸೋಂಕು ವ್ಯಾಪಕವಾಗಿದ್ದು, ಸೋಂಕಿಗೆ ಬಲಿಯಾದ ಮಕ್ಕಳ ಸಂಖ್ಯೆ 84ಕ್ಕೆ ಏರಿಕೆಯಾಗಿದೆ. ಅಂತೆಯೇ ಸಿಎಂ ನಿತೀಶ್ ಕುಮಾರ್ ಸಾವನ್ನಪ್ಪಿದ ಮಕ್ಕಳ ಕುಟುಂಕ್ಕೆ ನಾಲ್ಕು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಬಿಹಾರದಲ್ಲಿ ಬೇಸಿಗೆ ತಾಪಮಾನ ವ್ಯಾಪಕವಾಗಿ ಏರಿಕೆಯಾಗಿದ್ದು, ಇದೂ ಕೂಡ ಮಕ್ಕಳಲ್ಲಿ ಜ್ವರ ಹೆಚ್ಚಾಗಲು ಕಾರಣವಾಗಿದೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಿದುಳು ಸೋಂಕು ಮಕ್ಕಳಲ್ಲಿ ವ್ಯಾಪಕವಾಗಿದ್ದು, ಈ ವರೆಗೂ ಈ ಸೋಂಕಿಗೆ 84 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯವಾಗಿ ಇದನ್ನು ಚಮ್ಕಿ ಜ್ವರ ಎಂದು ಕರೆಯುತ್ತಾರೆ.
4 ಲಕ್ಷ ಪರಿಹಾರ ಘೋಷಣೆ
ಇನ್ನು ಎಇಎಸ್ ಸೋಂಕಿಗೆ ಬಲಿಯಾದವರ ಕುಟುಂಬಗಳಿಗೆ ಬಿಹಾರ ಸರ್ಕಾರ ನಾಲ್ಕು ಲಕ್ಷ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ ಮಾಡಿದ್ದಾರೆ. ಮುಜಾಫರ್ ಪುರದಲ್ಲಿ ವೈದ್ಯಾಧಿಕಾರಿಗಳು ಹೈ ಅಲರ್ಟ್ ನಲ್ಲಿರುವಂತೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT