ಸಂಗ್ರಹ ಚಿತ್ರ 
ದೇಶ

ಸಂಧಾನಕ್ಕೆ ಸಿದ್ಧ, ಆದರೆ ಕಣ್ಣೊರೆಸುವ ತಂತ್ರಗಾರಿಕೆ ಬೇಡ: ದೀದಿಗೆ ವೈದ್ಯರ ಎಚ್ಚರಿಕೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ಅಂತಿಮ ಘಟ್ಟ ತಲುಪಿದೆ ಎನ್ನುತ್ತಿರುವಾಗಲೇ ಸರ್ಕಾರ ನಡೆಸಿರುವ ಸಂಧಾನ ಪ್ರಯತ್ನ ಕಣ್ಣೊರೆಸುವ ತಂತ್ರಗಾರಿಕೆ ಎಂದು ವೈದ್ಯರು ಕಿಡಿಕಾರಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ಅಂತಿಮ ಘಟ್ಟ ತಲುಪಿದೆ ಎನ್ನುತ್ತಿರುವಾಗಲೇ ಸರ್ಕಾರ ನಡೆಸಿರುವ ಸಂಧಾನ ಪ್ರಯತ್ನ ಕಣ್ಣೊರೆಸುವ ತಂತ್ರಗಾರಿಕೆ ಎಂದು ವೈದ್ಯರು ಕಿಡಿಕಾರಿದ್ದಾರೆ.
ವೈದ್ಯರ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ವೈದ್ಯರೊಂದಿಗೆ ಸಂಧಾನ ಸಭೆಗೆ ಮುಂದಾಗಿದ್ದಾರೆಯಾದರೂ, ಸರ್ಕಾರದ ಸಂಧಾನಸಭೆ ಕುರಿತು ವೈದ್ಯರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಆರಂಭದಲ್ಲಿ ಬಂಗಾಳ ಸಚಿವಾಲಯದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತಾದರೂ, ಬಳಿಕ ಅಧಿಕಾರಿಗಳು ತಾವು ಹೇಳುವ ಜಾಗದಲ್ಲೇ ಸಂಧಾನಸಭೆ ನಡೆಯಬೇಕು ಎಂದು ಬೇಡಿಕೆ ಇರಿಸಿದ್ದಾರೆ. ಹೀಗಾಗಿ ಸರ್ಕಾರದಿಂದ ಸಂಧಾನಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಸಂಧಾನಕ್ಕೆ ನಾವು ಮೊದಲಿನಿಂದಲೂ ಸಿದ್ಧರಿದ್ದೇವೆ. ಸಂಧಾನಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಅವರು ಒಂದು ಕೈ ನೀಡಿದರು ನಾವು ನಮ್ಮ ಹತ್ತು ಕೈಗಳನ್ನು ಚಾಚಲು ಸಿದ್ಧ. ನಮಗೂ ಕೂಡ ರೋಗಿಗಳಿಗೆ ತೊಂದರೆ ನೀಡಲು ಇಷ್ಟವಿಲ್ಲ. ಆದರೆ ಸರ್ಕಾರದಿಂದ ಸಂಧಾನಕ್ಕೆ ಪ್ರಾಮಾಣಿಕ ಪ್ರಯತ್ನವಾಗುತ್ತಿಲ್ಲ. ಕೇವಲ ಕಣ್ಣೊರೆಸುವ ತಂತ್ರಗಾರಿಕೆಗೆ ನಾವು ಬಗ್ಗುವುದಿಲ್ಲ. ಅಂತೆಯೇ ನಮ್ಮಲ್ಲಿನ ಯಾವುದೇ ವೈದ್ಯರು ಸಚಿವಾಲಯಕ್ಕೆ ಹೋಗಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

SCROLL FOR NEXT