ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಪ್ರಮಾಣ ವಚನ ಸ್ವೀಕಾರಕ್ಕೂ ತಕರಾರು ತೆಗೆದ ವಿಪಕ್ಷಗಳು! 
ದೇಶ

ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಪ್ರಮಾಣ ವಚನ ಸ್ವೀಕಾರದಲ್ಲೂ ತಕರಾರು ತೆಗೆದ ವಿಪಕ್ಷಗಳು!

2019 ರ ಲೋಕಸಭಾ ಚುನಾವಣೆ ವೇಳೆ ಅತಿ ಹೆಚ್ಚು ಸುದ್ದಿಯಾಗಿದ್ದ ಅಭ್ಯರ್ಥಿಗಳ ಪೈಕಿ ಭೋಪಾಲ್ ನಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಕೂಡ ಒಬ್ಬರು.

ನವದೆಹಲಿ: 2019 ರ ಲೋಕಸಭಾ ಚುನಾವಣೆ ವೇಳೆ ಅತಿ ಹೆಚ್ಚು ಸುದ್ದಿಯಾಗಿದ್ದ ಅಭ್ಯರ್ಥಿಗಳ ಪೈಕಿ ಭೋಪಾಲ್ ನಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಕೂಡ ಒಬ್ಬರು. 
ಗಾಂಧಿ-ಗೋಡ್ಸೆ ಹೇಳಿಕೆಯಿಂದಾಗಿ ಸ್ವಪಕ್ಷೀಯರು ಹಾಗೂ ವಿಪಕ್ಷದವರಿಂದಲೂ ಭಾರಿ ವಿರೋಧ ಎದುರಿಸಿದ್ದ ಸಾಧ್ವಿ ಪ್ರಗ್ಯಾ ಸಿಂಗ್ ಈಗ ಭೋಪಾಲ್ ನ  ಸಂಸದೆ, ಈಗ ವಿಪಕ್ಷಗಳು ಸಾಧ್ವಿ ಪ್ರಗ್ಯಾ ಸಿಂಗ್ ಪ್ರಮಾಣ ವಚನ ಸ್ವೀಕಾರಕ್ಕೂ ತಕರಾರು ತೆಗೆದಿದ್ದು, ಸಂಸತ್ ನಲ್ಲಿ ಮೊದಲ ದಿನವೇ ಸಾಧ್ವಿ ವಿವಾದಕ್ಕೆ ಗುರಿಯಾಗಿದ್ದಾರೆ. 
ಜೂ.17 ರಂದು ಸಂಸತ್ ಅಧಿವೇಶನ ಪ್ರಾರಂಭವಾಗಿದ್ದು, 17 ನೇ ಲೋಕಸಭೆಗೆ ಆಯ್ಕೆಗೊಂಡ ಎಲ್ಲಾ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಾಧ್ವಿ ಪ್ರಗ್ಯಾ ಸಿಂಗ್ ಪ್ರಮಾಣ ವಚನ ಸ್ವೀಕರಿಸುವಾಗ ತಮ್ಮ ಧಾರ್ಮಿಕ ಗುರುವಿನ ಹೆಸರನ್ನು ತಮ್ಮ ಹೆಸರಿನ ಹಿಂದೆ ಸೇರಿಸಿ ಪ್ರಮಾಣ ವಚನ ಸ್ವೀಕರಿಸಿದ್ದಾರೆಂಬುಂದು ಈಗ ವಿಪಕ್ಷಗಳ ಹೊಸ ತಕರಾರು. 
ವಿಪಕ್ಷಗಳ ತಕರಾರಿಗೆ ಪ್ರತಿಕ್ರಿಯೆ ನೀಡಿರುವ ಸಂಸದೆ ಸಾಧ್ವಿ, ಅದು ತನ್ನ ಪೂರ್ಣ ಹೆಸರೆಂದು ಸಮರ್ಥನೆ ನೀಡಿದ್ದಾರೆ. ಸ್ವಾಮಿ ಪೂರ್ಣ ಚೇತನಾನಂದ ಅವ್ದೇಶಾನಂದ್ ಗಿರಿ ಎಂಬ ಹೆಸರನ್ನು ಸಾಧ್ವಿ ತಮ್ಮ ಹೆಸರಿನೊಂದಿಗೆ ಜೋಡಿಸಿ ಪ್ರಮಾಣ ವಚನ ಸ್ವೀಕರಿಸಿದ್ದರು, ಇದಕ್ಕೆ ಅವಕಾಶವಿಲ್ಲವೆಂದು ವಿಪಕ್ಷ ಸದಸ್ಯರು ಗದ್ದಲ ಉಂಟುಮಾಡಿದ್ದರು.
ಈ ವೇಳೆ ಮಧ್ಯಪ್ರವೇಶಿಸಿದ ಹಂಗಾಮಿ ಸ್ಪೀಕರ್ ವಿರೇಂದ್ರ ಕುಮಾರ್ ಲೋಕಸಭಾ ಪ್ರಧಾನ ಕಾರ್ಯದರ್ಶಿಯ ಸಲಹೆ ಪಡೆದು ಚುನಾವಣೆ ಗೆದ್ದ ಅಭ್ಯರ್ಥಿಯ ಹೆಸರನ್ನು ರಿಟರ್ನಿಂಗ್ ಆಫೀಸರ್ ಏನೆಂದು ನಮೂದಿಸಿರುತ್ತಾರೋ ಅದೇ ದಾಖಲೆಗಳಲ್ಲಿ ಉಳಿಯಲಿದೆ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT