ಅಧಿರ್ ರಂಜನ್ ಚೌಧರಿ 
ದೇಶ

ಕಾಂಗ್ರೆಸ್ ಸಂಸದೀಯ ನಾಯಕನಾಗಿ ಅಧಿರ್ ರಂಜನ್ ಚೌಧರಿ ನೇಮಕ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಂಸದೀಯ ನಾಯಕರಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಅಧಿರ್ ರಂಜನ್ ಚೌಧರಿ ಅವರನ್ನು...

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಂಸದೀಯ ನಾಯಕರಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಅಧಿರ್ ರಂಜನ್ ಚೌಧರಿ ಅವರನ್ನು 17ನೇ ಲೋಕಸಭೆಯ ಸಂಸದೀಯ ನಾಯಕನನ್ನಾಗಿ ಮಂಗಳವಾರ ನೇಮಕ ಮಾಡಲಾಗಿದೆ.
ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ರಾಹುಲ್ ಗಾಂಧಿ ಸಹ ಉಪಸ್ಥಿತರಿದ್ದರು.
ಚೌಧರಿ ನೇಮಕದ ಕುರಿತು ಲೋಕಸಭಾ ಸ್ಪೀಕರ್ ಹಾಗೂ ಎಲ್ಲಾ ಪ್ರಮುಖ ಆಯ್ಕೆ ಸಮಿತಿಗಳಿಗೆ ಕಾಂಗ್ರೆಸ್ ಪತ್ರ ಬರೆದಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಚೌಧಿರಿ ಅವರು ಪಶ್ಚಿಮ ಬಂಗಾಳದ ಬೆಹ್ರಾಂಪೊರ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದು, 1999ರಿಂದ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
16ನೇ ಲೋಸಭೆಯಲ್ಲಿ ಮಲ್ಲಿಕಾರ್ಜನ್ ಖರ್ಗೆ ಅವರು ಕಾಂಗ್ರೆಸ್ ಸಂಸದೀಯ ನಾಯಕರಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಈ ಬಾರಿ ಅವರು ಪರಾಭವಗೊಂಡಿದ್ದರಿಂದ ಆ ಸ್ಥಾನಕ್ಕೆ ಅಧಿರ್ ರಂಜನ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ.
ಸಂಸತ್ ಕಾಯ್ದೆ 1977ರ ಪ್ರಕಾರ, ಪ್ರತಿಪಕ್ಷ ನಾಯಕನ ವೇತನ ಮತ್ತು ಭತ್ಯೆಗಳು ಅತಿದೊಡ್ಡ ಪ್ರತಿಪಕ್ಷ ನಾಯಕನಿಗೆ ಲಭ್ಯವಾಗುತ್ತದೆ. ಸದನದ ಒಟ್ಟು ಸದಸ್ಯಬಲದ ಶೇ. 10ರಷ್ಟು ಸ್ಥಾನ ಗಳಿಸಿದ ಪಕ್ಷಕ್ಕೆ ಪ್ರತಿಪಕ್ಷದ ನಾಯಕನ ಸ್ಥಾನ ದೊರೆಯುತ್ತದೆ. ಅಂದರೆ ಪ್ರತಿಪಕ್ಷದ ಸ್ಥಾನಮಾನ ದಕ್ಕಲು ಕನಿಷ್ಠ 55 ಸ್ಥಾನಗಳು ಇರಬೇಕು. ಆದರೆ ಕಾಂಗ್ರೆಸ್‌ ಸದಸ್ಯ ಬಲ ಕೇವಲ 52. 
ಅಧಿಕೃತ ಪ್ರತಿಪಕ್ಷದ ಸ್ಥಾನಕ್ಕೆ ಮೂರು ಸೀಟುಗಳ ಕೊರತೆಯನ್ನು ಕಾಂಗ್ರೆಸ್ ಎದುರಿಸುತ್ತಿದೆ. ಹಾಗಿದ್ದರೂ ಸ್ಪೀಕರ್ ನಿರ್ಧಾರವೇ ಅಂತಿಮವಾಗಿದ್ದು, ಕಾಂಗ್ರೆಸ್‌ಗೆ ಪ್ರತಿಪಕ್ಷ ಸ್ಥಾನ ನೀಡಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT