ಸಂಗ್ರಹ ಚಿತ್ರ 
ದೇಶ

ಆಂಧ್ರ ಪ್ರದೇಶ: ರೈತರಿಗೆ ಹಗಲಿನಲ್ಲಿ 9 ಗಂಟೆ ವಿದ್ಯುತ್ ಪೂರೈಕೆ

ಆಂಧ್ರ ಪ್ರದೇಶದಲ್ಲಿನ ರೈತರಿಗೆ ಹಗಲಿನಲ್ಲಿ 9 ಗಂಟೆ ವಿದ್ಯುತ್ ಪೂರೈಸುವ ಸಂಬಂಧ ಒಂದು ವಾರದೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನಿರ್ದೇಶಿಸಿದ್ದಾರೆ.

ವಿಜಯವಾಡ:ಆಂಧ್ರ ಪ್ರದೇಶದಲ್ಲಿನ ರೈತರಿಗೆ ಹಗಲಿನಲ್ಲಿ 9 ಗಂಟೆ ವಿದ್ಯುತ್ ಪೂರೈಸುವ 
ಸಂಬಂಧ ಒಂದು ವಾರದೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನಿರ್ದೇಶಿಸಿದ್ದಾರೆ.
ಹಗಲಿನಲ್ಲಿ ರೈತರಿಗೆ 9 ಗಂಟೆಗಳ ವಿದ್ಯುತ್ ಪೂರೈಕೆಯ ಪರಿಣಾಮಕಾರಿ ಅನುಷ್ಠಾನದ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ ಎಂದು ಅವರು ಹೇಳಿದ್ದಾರೆ.
ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಜಗನ್ ಮೋಹನ್ ರೆಡ್ಡಿ, 6,663 ಫೀಡರ್ ಗಳ ಮೂಲಕ ಕೃಷಿ ಹಾಗೂ ದೇಶಿ ವಲಯಗಳಿಗೆ ವಿದ್ಯುತ್ ಪೂರೈಸಲಾಗುತ್ತಿದೆ. ಈ ಪೈಕಿ ಶೇ, 60 ರಷ್ಟು 9 ಗಂಟೆ ವಿದ್ಯುತ್  ಪೂರೈಸುವ ಸಾಮರ್ಥ್ಯವನ್ನು ಪಡೆದಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. 
ಯಾವುದೇ ತಾಂತ್ರಿಕ ದೋಷಗಳಿದ್ದರೆ ಒಂದು ವಾರದೊಳಗೆ ಬಗೆಹರಿಸಿಕೊಂಡು ಪ್ರಾಯೋಗಿಕವಾಗಿ ಹಗಲಿನ ವೇಳೆಯಲ್ಲಿ  ರೈತರಿಗೆ 9 ಗಂಟೆ ವಿದ್ಯುತ್ ಪೂರೈಕೆ ಯೋಜನೆ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ.
ಅಕ್ರಮ ಮಧ್ಯ ಅಂಗಡಿಗಳನ್ನು ಆದಷ್ಟು ಬೇಗ ತೆರವುಗೊಳಿಸುವಂತೆ ಜಗನ್ ಮೋಹನ್ ರೆಡ್ಡಿ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT