ನವದೆಹಲಿ: ಲೋಕಸಭೆಯಲ್ಲಿ ಸಂಸದ ಸಾಕ್ಷಿ ಮಹಾರಾಜ್ ಪ್ರಮಾಣ ವಚನ ಸ್ವೀಕರಿಸುವ ವೇಳೆ ಸದಸ್ಯರು ಮಂದಿರ ಅಲ್ಲೇ ನಿರ್ಮಿಸುವೆವು ಎಂಬ ಘೋಷಣೆ ಕೇಳಿಬಂದಿದೆ.
ಸಾಕ್ಷಿ ಮಹಾರಾಜ್ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು, ಪ್ರಮಾಣ ವಚನ ಸ್ವೀಕಾರದ ಕೊನೆಯಲ್ಲಿ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರು. ಇದಕ್ಕೆ ಪೂರಕವಾಗಿ ಬಿಜೆಪಿ ಸದಸ್ಯರು ಮಂದಿರ ಅಲ್ಲೇ ನಿರ್ಮಿಸುತ್ತೇವೆ ಎಂದು ಘೋಷಣೆ ಕೂಗಿದ್ದಾರೆ.