ಸಂಗ್ರಹ ಚಿತ್ರ 
ದೇಶ

ಎನ್ಸಿಫಾಲಿಟಿಸ್ ಸೋಂಕು, ಸಾವಿನ ಸಂಖ್ಯೆ 117ಕ್ಕೆ ಏರಿಕೆ: ಚುನಾವಣೆಗೆ ಆದ್ಯತೆ, ಜಾಗೃತಿ ಅಭಿಯಾನ ಮರೆತ ಬಿಹಾರ?

ಬಿಹಾರದಲ್ಲಿ ಎನ್ಸಿಫಾಲಿಟಿಸ್ ಮಿದುಳು ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಈ ವರೆಗೂ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 117ಕ್ಕೆ ಏರಿಕೆಯಾಗಿದೆ.

ಪಾಟ್ನಾ: ಬಿಹಾರದಲ್ಲಿ ಎನ್ಸಿಫಾಲಿಟಿಸ್ ಮಿದುಳು ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಈ ವರೆಗೂ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 117ಕ್ಕೆ ಏರಿಕೆಯಾಗಿದೆ.
ಬಿಹಾರದ ಮುಜಾಫರ್ ನಗರದಲ್ಲಿ ಮಿದುಳು ಸೋಂಕು ಎನ್ಸಿಫಾಲಿಟಿಸ್ ಗೆ ಬಲಿಯಾದವರ ಸಂಖ್ಯೆ 117ಕ್ಕೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ಕೃಷ್ಣ ವೈದ್ಯಕೀಯ ಕಾಲೇಜೊಂದರಲ್ಲೇ 98 ಮಂದಿ ಸಾವನ್ನಪ್ಪಿದ್ದು, ಕೇಜ್ರಿವಾಲ್ ಆಸ್ಪತ್ರೆಯಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. ಪ್ರಸ್ತುತ ಸೋಂಕು ಪೀಡಿತ ಮುಜಾಫರ್ ಪುರ ನಗರಕ್ಕೆ ಬಿಹಾರ ಸರ್ಕಾರ ಹೆಚ್ಚುವರಿ ವೈದ್ಯರನ್ನು ನಿಯೋಜಿಸಿದ್ದು, ತುರ್ತು ಸಂದರ್ಭಗಳನ್ನು ಹೊರತು ಪಡಿಸಿ ವೈದ್ಯರಿಗೆ ಸಾಮಾನ್ಯ ರಜೆ ನೀಡದಂತೆ ಆದೇಶ ನೀಡಿದೆ. 
ಜಾಗೃತಿ ಅಭಿಯಾನವನ್ನೇ ಕೈ ಬಿಟ್ಟಿದ್ದ ಬಿಹಾರ ಸರ್ಕಾರ?
ಇನ್ನು ಕಳೆದ ಮೂರು ವರ್ಷಗಳಿಂದ ಬಿಹಾರ ಜನತೆಯನ್ನು ಕಾಡುತ್ತಿರುವ ಎನ್ಸಿಫಾಲಿಟೀಸ್ ಮಿದುಳು ಸೋಂಕಿನ ಕುರಿತಂತೆ ಬಿಹಾರ ಸರ್ಕಾರದ ನಿರ್ಲಕ್ಷ್ಯವೇ ಸಾವಿನ ಸಂಖ್ಯೆ ಏರಿಕೆಗೆ ಕಾರಣ ಎನ್ನಲಾಗತ್ತಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಕಾರ್ಯದಲ್ಲಿ ಬಿಸಿಯಾಗಿದ್ದ ಅಧಿಕಾರಿಗಳು ಮಿದುಳು ಸೋಂಕಿನ ಕುರಿತು ಸರ್ಕಾರ ಯೋಜಿಸಿದ್ದ ಜಾಗೃತಿ ಅಭಿಯಾನವನ್ನು ಸ್ಥಗಿತಗೊಳಿಸಿತ್ತು. ಪ್ರತೀ ವರ್ಷ ಮೇ ಮತ್ತು ಏಪ್ರಿಲ್ ತಿಂಗಳಿನಲ್ಲಿ ಬಿಹಾರ ಸರ್ಕಾರ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜಾಗೃತಿ ಅಭಿಯಾನ ನಡೆಸುತ್ತಿತ್ತು. ಆ ಮೂಲಕ ಜನರಲ್ಲಿ ಮಿದುಳು ಸೋಂಕನ್ನು ನಿಯಂತ್ರಿಸುವ ಕುರಿತು ಮಾಹಿತಿ ನೀಡುತ್ತಿತ್ತು. ಆದರೆ ಈ ಬಾರಿ ಚುನಾವಣೆ ಹಿನ್ನಲೆಯಲ್ಲಿ ಜಾಗೃತಿ ಅಭಿಯಾನ ನಿರೀಕ್ಷಿತ ಮಟ್ಟದಲ್ಲಿ ನಡೆದಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT