ರಾಜಾ ಸಿಂಗ್ 
ದೇಶ

ಬಿಜೆಪಿ ಶಾಸಕ ರಾಜಾ ಸಿಂಗ್ ರಿಂದ ಸ್ವಯಂ ಪ್ರೇರಿತ ಗಾಯ: ಹೈದರಾಬಾದ್ ಪೊಲೀಸರು

ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್‌ ಅವರು ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಹೈದರಾಬಾದ್....

ಹೈದರಾಬಾದ್: ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್‌ ಅವರು ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಹೈದರಾಬಾದ್ ಪೊಲೀಸರು, ಶಾಸಕರು ತಾವೇ ಸ್ವಯಂ ಪ್ರೇರಿತರಾಗಿ ಗಾಯ ಮಾಡಿಕೊಂಡಿದ್ದಾರೆ ಎಂದು ಗುರುವಾರ ಹೇಳಿದ್ದಾರೆ.
ನಿನ್ನೆ ತಡ ರಾತ್ರಿ ರಾಜಾ ಸಿಂಗ್ ಅವರು ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅವಂತಿ ಬಾಯಿ ಲೋಧ್‌ ಅವರ ಪ್ರತಿಮೆ ಪುನರ್‌ ಸ್ಥಾಪನೆಗಾಗಿ ಬೆಂಬಲಿಗರೊಂದಿಗೆ ತೆರಳಿದ ವೇಳೆ ಪೊಲೀಸರೊಂದಿಗೆ ಜಟಾಪಟಿ ನಡೆದಿತ್ತು. ಈ ವೇಳೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ನಲ್ಲಿ ಶಾಸಕರು ಗಾಯಗೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.
ರಾಜಾ ಸಿಂಗ್ ಅವರು ಗ್ರಾನೈಟ್ ಕಲ್ಲಿನಿಂದ ತಮ್ಮ ತಲೆಗೆ ಜಜ್ಜಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅವರ ಈ ಕೃತ್ಯದಿಂದ ಶಾಸಕರ ತಲೆಗೆ ಗಾಯವಾಗಿದೆ. ಅಲ್ಲಿ ಯಾವುದೇ ಲಾಠಿ ಚಾರ್ಜ್ ನಡೆದಿಲ್ಲ. ಒಂದು ವೇಳೆ ಲಾಠಿ ಚಾರ್ಜ್ ನಡೆದಿದ್ದರೆ ಬೇರೆಯವರಿಗೂ ಗಾಯವಾಗಬೇಕಿತ್ತು ಎಂದು ಉಪ ಪೊಲೀಸ್ ಆಯುಕ್ತ ಎಆರ್ ಶ್ರೀನಿವಾಸ್ ಅವರು ಹೇಳಿದ್ದಾರೆ.
ಪ್ರತಿಮೆ ಪುನರ್‌ ಸ್ಥಾಪನೆಗೆ ಹೈದರಾಬಾದ್ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆದಿರಲಿಲ್ಲ. ಹೀಗಾಗಿ ಅದನ್ನು ತಡೆಯಲು ಪೊಲೀಸರು ಯತ್ನಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜುಮೀರತ್‌ ಬಜಾರ್‌ನಲ್ಲಿ 2009 ರಲ್ಲಿ ಮೂರ್ತಿ ಸ್ಥಾಪಿಸಲಾಗಿತ್ತು, ಆದರೆ ಎರಡು ಬಾರಿ ಹಾನಿಯಾದ ಹಿನ್ನಲೆಯಲ್ಲಿ ಅದನ್ನು ತೆರವುಗೊಳಿಸಲಾಗಿತ್ತು.
ರಾಜಾ ಸಿಂಗ್ ಅವರು ಸುಮಾರು 200 ಬೆಂಬಲಿಗರೊಂದಿಗೆ ಪ್ರತಿಮೆಯನ್ನು ಪುನರ್‌ ಸ್ಥಾಪಿಸಲು ತೆರಳಿದಾಗ ಪೊಲೀಸರು ಅದನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಶಾಸಕರ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ.
ಪೊಲೀಸರ ವರ್ತನೆಯಿಂದ ಆಕ್ರೋಶಗೊಂಡ ರಾಜಾ ಸಿಂಗ್ ಅವರು ತಮ್ಮ ಕೈಯಲ್ಲಿದ್ದ ಕಲ್ಲಿನಿಂದ ತಲೆಗೆ ಬಡಿದುಕೊಂಡ ಪರಿಣಾಮ ತಲೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಅವರನ್ನು ಓಸ್ಮಾನಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆಯ ಬಳಿಕ ಇಂದು  ಬೆಳಗ್ಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT