ಚಂದ್ರಬಾಬು ನಾಯ್ಡು 
ದೇಶ

ಟಿಡಿಪಿ ತೊರೆಯಲು ಮುಂದಾದ ನಾಲ್ವರು ರಾಜ್ಯಸಭಾ ಸದಸ್ಯರು

ಮಾಜಿ ಸಚಿವ ವೈ ಎಸ್ ಚೌದರಿ ಸೇರಿದಂತೆ ರಾಜ್ಯಸಭೆಯ ನಾಲ್ವರು ತೆಲುಗು ದೇಶಂ ಪಕ್ಷದ(ಟಿಡಿಪಿ) ಸದಸ್ಯರು, ಪಕ್ಷ ತ್ಯಜಿಸಿ ಸದನದಲ್ಲಿ ತಮ್ಮ..

ನವದೆಹಲಿ: ಮಾಜಿ ಸಚಿವ ವೈ ಎಸ್ ಚೌದರಿ ಸೇರಿದಂತೆ ರಾಜ್ಯಸಭೆಯ ನಾಲ್ವರು ತೆಲುಗು ದೇಶಂ ಪಕ್ಷದ(ಟಿಡಿಪಿ) ಸದಸ್ಯರು, ಪಕ್ಷ ತ್ಯಜಿಸಿ ಸದನದಲ್ಲಿ ತಮ್ಮ ಬಣಕ್ಕೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡುವಂತೆ ಕೋರುವ ಸಾಧ್ಯತೆಯಿದೆ.
ಪಕ್ಷ ತ್ಯಜಿಸಲಿರುವ ಇತರೆ ಸದಸ್ಯರೆಂದರೆ ಸಿ ಎಂ ರಮೇಶ್, ಗರಿಕಪತಿ ಮೋಹನ್ ರಾವ್ ಎಂದು ಮೂಲಗಳು ತಿಳಿಸಿವೆ.
ಟಿ ಜಿ ವೆಂಕಟೇಶ್ ಅವರು ರಾಜ್ಯ ಸಭೆಯ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಸದನದಲ್ಲಿ ಪಕ್ಷದಲ್ಲಿನ ವಿಭಜನೆ ಗುರುತಿಸಿ ಅವರಿಗೆ ಪ್ರತ್ಯೇಕ ಸ್ಥಾನಮಾನ ನೀಡುವಂತೆ ಪತ್ರ ಬರೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.
ಚೌದರಿ ಅವರು ನವೆಂಬರ್ 2014 ರಿಂದ ಮಾರ್ಚ್ 2018 ರವರೆಗೆ ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಹಾಯಕ ಸಚಿವರಾಗಿ ಕೆಲಸ ಮಾಡಿದ್ದರು.
ಚೌದರಿ, ರಮೇಶ್ ಮತ್ತು ವೆಂಕಟೇಶ್ ಅವರು ಆಂಧ್ರಪ್ರದೇಶದ ರಾಜ್ಯಸಭಾ ಸದಸ್ಯರಾಗಿದ್ದರೆ, ರಾವ್ ತೆಲಂಗಾಣದ ಸದಸ್ಯರಾಗಿದ್ದು, ರಾಜ್ಯದ ಬಿಜೆಪಿ ಮುಖಂಡರು ಇವರುಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
ಚೌದರಿ ಮತ್ತು ಆಗಿನ ವಿಮಾನಯಾನ ಸಚಿವರಾಗಿದ್ದ ಅಶೋಕ್ ಗಜಪತಿ ರಾಜು ಅವರುಗಳು 2018 ರಲ್ಲಿ ಎನ್ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಎನ್ ಡಿಎ ಮೈತ್ರಿಯಿಂದ ಹೊರ ಬರಲು ನಿರ್ಧರಿಸಿದಾಗ ಸರ್ಕಾರವನ್ನು ತೊರೆದು ಹೊರಬಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT