ಎಎನ್ -32 ವಿಮಾನ ಅಪಘಾತ ಪ್ರದೇಶ 
ದೇಶ

ವಾಯುಪಡೆ ವಿಮಾನ ಪತನ ಪ್ರದೇಶದಿಂದ ಆರು ಮೃತದೇಹಗಳು,ಏಳು ಕಳೇಬರ ವಶ

ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ಜೂನ್ 3 ರಂದು ನಡೆದಿದ್ದ ವಾಯುಪಡೆಯ ಎಎನ್-32 ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ವಾಯುಪಡೆಯ ಏಳು ಯೋಧರ ಕಳೇಬರ ಹಾಗೂ ಆರು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗುವಾಹಟಿ:  ಅರುಣಾಚಲ ಪ್ರದೇಶದ  ಸಿಯಾಂಗ್ ಜಿಲ್ಲೆಯಲ್ಲಿ ಜೂನ್ 3 ರಂದು  ನಡೆದಿದ್ದ ವಾಯುಪಡೆಯ ಎಎನ್-32 ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ವಾಯುಪಡೆಯ ಏಳು ಯೋಧರ ಕಳೇಬರ ಹಾಗೂ  ಆರು ಮೃತದೇಹಗಳನ್ನು  ವಶಪಡಿಸಿಕೊಳ್ಳಲಾಗಿದೆ. 
ಪಶ್ಚಿಮ ಸಿಯಾಂಗ್  ಜಿಲ್ಲಾ ಕೇಂದ್ರ ಆಲೋನಲ್ಲಿನ  ಭಾರತೀಯ ವಾಯುಪಡೆಯ ಕೇಂದ್ರ ಕಚೇರಿಗೆ ಯೋಧರ  ಕಳೇಬರ  ಹಾಗೂ ಮೃತದೇಹಗಳನ್ನು ತೆಗೆದುಕೊಂಡು ಹೋಗಲಾಗಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ವಿಮಾನ ಅಪಘಾತ ಅವಶೇಷಗಳು ದೊರೆತ ಪ್ರದೇಶದಲ್ಲಿ  ಏಳು ಯೋಧರ ಕಳೇಬರ ಹಾಗೂ ಆರು ಮೃತದೇಹಗಳು ಸೇರಿದಂತೆ ಒಟ್ಟಾರೇ, 13 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶಿಲಾಂಗ್ ವಾಯುನೆಲೆಯ  ವಕ್ತಾರ ವಿಂಗ್ ಕಮಾಂಡರ್ ರತ್ನಾಕರ್ ಸಿಂಗ್ ಇಂದು ಹೇಳಿದ್ದಾರೆ.
ಜೂನ್ 11 ರಂದು ಅಪಘಾತಗೊಂಡ ವಿಮಾನ ಅವಶೇಷಗಳು ಪತ್ತೆಯಾಗಿತ್ತು. ಜೂನ್ 12 ರಂದು 18 ರಕ್ಷಣಾ ಸಿಬ್ಬಂದಿಯನ್ನೊಳಗೊಂಡ ಎರಡು ತಂಡಗಳು ಅವಶೇಷಗಳು ದೊರೆತ ಸ್ಥಳಕ್ಕೆ ಭೇಟಿ ನೀಡಿದ್ದವು. 20 ಸಿಬ್ಬಂದಿಯನ್ನೊಳಗೊಂಡ ಮೂರನೇ ತಂಡ ಎರಡು ದಿನಗಳ ಹಿಂದಷ್ಟೇ ಈ ಸ್ಥಳಕ್ಕೆ ಭೇಟಿ ನೀಡಿದ್ದಾಗಿ ವಾಯುಪಡೆಯ ಅಧಿಕಾರಿ ಡಿರೊಚಿ ಹೇಳಿದ್ದಾರೆ.
ರಷ್ಯಾ ನಿರ್ಮಿತ ಭಾರತೀಯ ವಾಯುಪಡೆಯ ಎಎನ್-32 ವಿಮಾನ ಜೂನ್ 3 ರಂದು ಜರ್ಹಾತ್ ವಾಯುನೆಲೆಯಿಂದ ನಾಪತ್ತೆಯಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT