ಎಎನ್ -32 ವಿಮಾನ ಅಪಘಾತ ಪ್ರದೇಶ 
ದೇಶ

ವಾಯುಪಡೆ ವಿಮಾನ ಪತನ ಪ್ರದೇಶದಿಂದ ಆರು ಮೃತದೇಹಗಳು,ಏಳು ಕಳೇಬರ ವಶ

ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ಜೂನ್ 3 ರಂದು ನಡೆದಿದ್ದ ವಾಯುಪಡೆಯ ಎಎನ್-32 ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ವಾಯುಪಡೆಯ ಏಳು ಯೋಧರ ಕಳೇಬರ ಹಾಗೂ ಆರು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗುವಾಹಟಿ:  ಅರುಣಾಚಲ ಪ್ರದೇಶದ  ಸಿಯಾಂಗ್ ಜಿಲ್ಲೆಯಲ್ಲಿ ಜೂನ್ 3 ರಂದು  ನಡೆದಿದ್ದ ವಾಯುಪಡೆಯ ಎಎನ್-32 ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ವಾಯುಪಡೆಯ ಏಳು ಯೋಧರ ಕಳೇಬರ ಹಾಗೂ  ಆರು ಮೃತದೇಹಗಳನ್ನು  ವಶಪಡಿಸಿಕೊಳ್ಳಲಾಗಿದೆ. 
ಪಶ್ಚಿಮ ಸಿಯಾಂಗ್  ಜಿಲ್ಲಾ ಕೇಂದ್ರ ಆಲೋನಲ್ಲಿನ  ಭಾರತೀಯ ವಾಯುಪಡೆಯ ಕೇಂದ್ರ ಕಚೇರಿಗೆ ಯೋಧರ  ಕಳೇಬರ  ಹಾಗೂ ಮೃತದೇಹಗಳನ್ನು ತೆಗೆದುಕೊಂಡು ಹೋಗಲಾಗಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ವಿಮಾನ ಅಪಘಾತ ಅವಶೇಷಗಳು ದೊರೆತ ಪ್ರದೇಶದಲ್ಲಿ  ಏಳು ಯೋಧರ ಕಳೇಬರ ಹಾಗೂ ಆರು ಮೃತದೇಹಗಳು ಸೇರಿದಂತೆ ಒಟ್ಟಾರೇ, 13 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶಿಲಾಂಗ್ ವಾಯುನೆಲೆಯ  ವಕ್ತಾರ ವಿಂಗ್ ಕಮಾಂಡರ್ ರತ್ನಾಕರ್ ಸಿಂಗ್ ಇಂದು ಹೇಳಿದ್ದಾರೆ.
ಜೂನ್ 11 ರಂದು ಅಪಘಾತಗೊಂಡ ವಿಮಾನ ಅವಶೇಷಗಳು ಪತ್ತೆಯಾಗಿತ್ತು. ಜೂನ್ 12 ರಂದು 18 ರಕ್ಷಣಾ ಸಿಬ್ಬಂದಿಯನ್ನೊಳಗೊಂಡ ಎರಡು ತಂಡಗಳು ಅವಶೇಷಗಳು ದೊರೆತ ಸ್ಥಳಕ್ಕೆ ಭೇಟಿ ನೀಡಿದ್ದವು. 20 ಸಿಬ್ಬಂದಿಯನ್ನೊಳಗೊಂಡ ಮೂರನೇ ತಂಡ ಎರಡು ದಿನಗಳ ಹಿಂದಷ್ಟೇ ಈ ಸ್ಥಳಕ್ಕೆ ಭೇಟಿ ನೀಡಿದ್ದಾಗಿ ವಾಯುಪಡೆಯ ಅಧಿಕಾರಿ ಡಿರೊಚಿ ಹೇಳಿದ್ದಾರೆ.
ರಷ್ಯಾ ನಿರ್ಮಿತ ಭಾರತೀಯ ವಾಯುಪಡೆಯ ಎಎನ್-32 ವಿಮಾನ ಜೂನ್ 3 ರಂದು ಜರ್ಹಾತ್ ವಾಯುನೆಲೆಯಿಂದ ನಾಪತ್ತೆಯಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT