ಎಎನ್ -32 ವಿಮಾನ ಅಪಘಾತ ಪ್ರದೇಶ 
ದೇಶ

ವಾಯುಪಡೆ ವಿಮಾನ ಪತನ ಪ್ರದೇಶದಿಂದ ಆರು ಮೃತದೇಹಗಳು,ಏಳು ಕಳೇಬರ ವಶ

ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ಜೂನ್ 3 ರಂದು ನಡೆದಿದ್ದ ವಾಯುಪಡೆಯ ಎಎನ್-32 ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ವಾಯುಪಡೆಯ ಏಳು ಯೋಧರ ಕಳೇಬರ ಹಾಗೂ ಆರು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗುವಾಹಟಿ:  ಅರುಣಾಚಲ ಪ್ರದೇಶದ  ಸಿಯಾಂಗ್ ಜಿಲ್ಲೆಯಲ್ಲಿ ಜೂನ್ 3 ರಂದು  ನಡೆದಿದ್ದ ವಾಯುಪಡೆಯ ಎಎನ್-32 ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ವಾಯುಪಡೆಯ ಏಳು ಯೋಧರ ಕಳೇಬರ ಹಾಗೂ  ಆರು ಮೃತದೇಹಗಳನ್ನು  ವಶಪಡಿಸಿಕೊಳ್ಳಲಾಗಿದೆ. 
ಪಶ್ಚಿಮ ಸಿಯಾಂಗ್  ಜಿಲ್ಲಾ ಕೇಂದ್ರ ಆಲೋನಲ್ಲಿನ  ಭಾರತೀಯ ವಾಯುಪಡೆಯ ಕೇಂದ್ರ ಕಚೇರಿಗೆ ಯೋಧರ  ಕಳೇಬರ  ಹಾಗೂ ಮೃತದೇಹಗಳನ್ನು ತೆಗೆದುಕೊಂಡು ಹೋಗಲಾಗಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ವಿಮಾನ ಅಪಘಾತ ಅವಶೇಷಗಳು ದೊರೆತ ಪ್ರದೇಶದಲ್ಲಿ  ಏಳು ಯೋಧರ ಕಳೇಬರ ಹಾಗೂ ಆರು ಮೃತದೇಹಗಳು ಸೇರಿದಂತೆ ಒಟ್ಟಾರೇ, 13 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶಿಲಾಂಗ್ ವಾಯುನೆಲೆಯ  ವಕ್ತಾರ ವಿಂಗ್ ಕಮಾಂಡರ್ ರತ್ನಾಕರ್ ಸಿಂಗ್ ಇಂದು ಹೇಳಿದ್ದಾರೆ.
ಜೂನ್ 11 ರಂದು ಅಪಘಾತಗೊಂಡ ವಿಮಾನ ಅವಶೇಷಗಳು ಪತ್ತೆಯಾಗಿತ್ತು. ಜೂನ್ 12 ರಂದು 18 ರಕ್ಷಣಾ ಸಿಬ್ಬಂದಿಯನ್ನೊಳಗೊಂಡ ಎರಡು ತಂಡಗಳು ಅವಶೇಷಗಳು ದೊರೆತ ಸ್ಥಳಕ್ಕೆ ಭೇಟಿ ನೀಡಿದ್ದವು. 20 ಸಿಬ್ಬಂದಿಯನ್ನೊಳಗೊಂಡ ಮೂರನೇ ತಂಡ ಎರಡು ದಿನಗಳ ಹಿಂದಷ್ಟೇ ಈ ಸ್ಥಳಕ್ಕೆ ಭೇಟಿ ನೀಡಿದ್ದಾಗಿ ವಾಯುಪಡೆಯ ಅಧಿಕಾರಿ ಡಿರೊಚಿ ಹೇಳಿದ್ದಾರೆ.
ರಷ್ಯಾ ನಿರ್ಮಿತ ಭಾರತೀಯ ವಾಯುಪಡೆಯ ಎಎನ್-32 ವಿಮಾನ ಜೂನ್ 3 ರಂದು ಜರ್ಹಾತ್ ವಾಯುನೆಲೆಯಿಂದ ನಾಪತ್ತೆಯಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT