ಸಂಗ್ರಹ ಚಿತ್ರ 
ದೇಶ

ಟಿಟಿಡಿ ಅಧ್ಯಕ್ಷಗಾದಿಗೆ ತಮ್ಮ ಚಿಕ್ಕಪ್ಪ ವೈವಿ ಸುಬ್ಬಾರೆಡ್ಡಿ ನೇಮಕ ಮಾಡಿದ ಸಿಎಂ ಜಗನ್!

ಮಹತ್ವದ ಬೆಳವಣಿಗೆಯಲ್ಲಿ ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ತಿರುಪತಿ ತಿರುಮಲ ದೇವಾಸ್ಥಾನಂ ಆಡಳಿತ ಮಂಡಳಿಗೆ ತಮ್ಮ ಚಿಕ್ಕಪ್ಪ ವೈವಿ ಸುಬ್ಬಾರೆಡ್ಡಿ ಅವರನ್ನು ನೇಮಕ ಮಾಡಿದ್ದಾರೆ.

ಅಮರಾವತಿ: ಮಹತ್ವದ ಬೆಳವಣಿಗೆಯಲ್ಲಿ ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ತಿರುಪತಿ ತಿರುಮಲ ದೇವಾಸ್ಥಾನಂ ಆಡಳಿತ ಮಂಡಳಿಗೆ ತಮ್ಮ ಚಿಕ್ಕಪ್ಪ ವೈವಿ ಸುಬ್ಬಾರೆಡ್ಡಿ ಅವರನ್ನು ನೇಮಕ ಮಾಡಿದ್ದಾರೆ.
ತಿರುಪತಿ ಶ್ರೀನಿವಾಸ ದೇಗುಲವೂ ಸೇರಿದಂತೆ ದೇಶದ ಹಲವು ಪ್ರಮುಖ ದೇಗುಲಗಳ ಆಡಳಿತ ನಿರ್ವಹಿಸುವ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಮ್ಸ್) ಆಡಳಿತ ಮಂಡಳಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ಮತ್ತು ವೈಎಸ್ಆರ್‌ ಕಾಂಗ್ರೆಸ್‌ ನಾಯಕ ವೈ.ವಿ.ಸುಬ್ಬಾರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ವೈ.ವಿ.ಸುಬ್ಬಾರೆಡ್ಡಿ ನೇಮಕಾತಿಗೆ ಸಂಬಂಧಿಸಿದಂತೆ ವಿಶೇಷ ಪ್ರಧಾನ ಕಾರ್ಯದರ್ಶಿ ಮನಮೋಹನ್ ಸಿಂಗ್ ಅವರು ಈ ಸಂಬಂಧ ಸರ್ಕಾರಿ ಆದೇಶ (ಜಿಒ) ಹೊರಡಿಸಿದ್ದಾರೆ. ವೈಎಸ್ಆರ್‌ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸುಬ್ಬಾರೆಡ್ಡಿ ಟಿಟಿಡಿ ಅಧ್ಯಕ್ಷರಾಗಿ ಇಂದು (ಜೂನ್ 22) ಅಧಿಕಾರ ಸ್ವೀಕರಿಸಲಿದ್ದಾರೆ ಎಂಜು ತಿಳಿದುಬಂದಿದೆ.
ಟಿಟಿಡಿ ಮಂಡಳಿಯ ಇತರ ಸದಸ್ಯರನ್ನೂ ಶೀಘ್ರ ನೇಮಿಸಲಾಗುವುದು ಎಂದು ಸಿಂಗ್ ಹೇಳಿದ್ದಾರೆ. ಟಿಟಿಡಿ ಅಧ್ಯಕ್ಷರಿಗೆ ಆಂಧ್ರಪ್ರದೇಶದಲ್ಲಿ ಸಂಪುಟದ ದರ್ಜೆ ಸ್ಥಾನಮಾನವಿದ್ದು, ಪ್ರತಿಷ್ಠಿತ ಹುದ್ದೆ ಎನಿಸಿಕೊಂಡಿದೆ.
ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಟಿಟಿಡಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಪುಟ್ಟ ಸುಧಾಕರ ರೆಡ್ಡಿ ಈಚೆಗಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜಿನಾಮೆ ಬೆನ್ನಲ್ಲೇ ಅದೇ ಸ್ಥಾನಕ್ಕಾಗಿ ಕಾದು ಕುಳಿತಿದ್ದ ಸುಬ್ಬಾರೆಡ್ಡಿ ಅವರಿಗೆ ಹಾದಿ ಸುಗಮವಾದಂತಾಗಿದೆ. ಇನ್ನು ನಾಲ್ಕು ದಿನಗಳ ಒಳಗೆ ಉಳಿದ ಸದಸ್ಯರ ನೇಮಕಾತಿ ಪೂರ್ಣಗೊಳಿಸಲಾಗುವುದು ಎಂದು ಮಾಧ್ಯಮಗಳು ವರದಿ ಮಾಡಿವೆ.
ಸುಬ್ಬಾರೆಡ್ಡಿ ನೇಮಕಕ್ಕೆ ಭಾರಿ ವಿರೋಧ
ಇನ್ನು ಸುಬ್ಬಾರೆಡ್ಡಿ ನೇಮಕ್ಕೆ ಆಂಧ್ರ ಪ್ರದೇಶದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು, ಸುಬ್ಬಾರೆಡ್ಡಿ ಓರ್ವ ಕ್ರಿಶ್ಚಿಯನ್. ಹೀಗಾಗಿ ಅವರ ನೇಮಕ ಮಾಡಬಾರದು ಎಂದು ಹಲವು ಸದಸ್ಯರು ವಿರೋಧಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸುಬ್ಬಾರೆಡ್ಡಿ ಅವರು, ನಾನು ಕೂಡ ಹಿಂದೂ ಎಂದು ಸುಬ್ಬಾರೆಡ್ಡಿ ತಮ್ಮ ಮೇಲಿನ ಆಪಾದನೆಗಳನ್ನು ತಳ್ಳಿ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಲ್ಫ್ ಆಫ್ ಮೆಕ್ಸಿಕೋ, ಒಂಟಾರಿಯೊ ಲೇಕ್ ಬಳಿಕ Strait of Hormuz ಗೆ ನನ್ನ ಹೆಸರು ಮರುನಾಮಕರಣ ಮಾಡಿ- ಅಮೆರಿಕ ಅಧ್ಯಕ್ಷ Trump ವಿಚಿತ್ರ ಬೇಡಿಕೆ!

ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಿಷ್ಠ: ದೇಶೀಯ ನಿರ್ಮಿತ ಗ್ಲೈಡ್ ಬಾಂಬ್ ಖಗಂಟಕ್ -243 ಪರೀಕ್ಷೆ ಯಶಸ್ವಿ

ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು, ಬಿಹಾರದಲ್ಲಿ ಹೈ ಅಲರ್ಟ್

AEE ನೇಮಕಾತಿಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ HDK ಸಾಲು ಸಾಲು ಪ್ರಶ್ನೆ; ಇದೇನಾ 'ದೇಶವೇ ಅಲ್ಲೋಲ ಕಲ್ಲೋಲ ಆಗೋ' ವಿಷಯ? Video

'aashiq banaya': 'ಅಕ್ಷರಶಃ ನಮ್ಮಿಬ್ಬರ ಕೆಮಿಸ್ಟ್ರಿ ಅಣ್ಣ-ತಂಗಿಯಂತಿತ್ತು': ನಟ ಇಮ್ರಾನ್ ಹಶ್ಮಿ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ನಟಿ Tanushree Dutta