ಪರಾರಿಯಾದ ಕೈದಿಗಳು 
ದೇಶ

ಭೂಪಾಲ್: ಭದ್ರತಾ ವೈಫಲ್ಯ, ಜೈಲು ಗೋಡೆ ಹಾರಿ ನಾಲ್ಕು ಕೈದಿಗಳು ಪರಾರಿ

ಭದ್ರತಾ ವೈಫಲ್ಯದಿಂದಾಗಿ ಮಧ್ಯಪ್ರದೇಶದ ನೀಮುಚ್‌ ಜಿಲ್ಲೆಯ ಕಾರಾಗೃಹದಿಂದ ನಾಲ್ವರು ಕೈದಿಗಳು ಪರಾರಿಯಾದ ಘಟನೆ ಭಾನುವಾರ ನಸುಕಿನ ವೇಳೆ ....

ಭೂಪಾಲ್:  ಭದ್ರತಾ ವೈಫಲ್ಯದಿಂದಾಗಿ ಮಧ್ಯಪ್ರದೇಶದ ನೀಮುಚ್‌ ಜಿಲ್ಲೆಯ ಕಾರಾಗೃಹದಿಂದ ನಾಲ್ವರು ಕೈದಿಗಳು ಪರಾರಿಯಾದ ಘಟನೆ ಭಾನುವಾರ ನಸುಕಿನ ವೇಳೆ ನಡೆದಿದೆ.
ಜೈಲರ್‌ ಮತ್ತು ಸಿಬ್ಬಂದಿಗಳಿಗೆ ತಿಳಿಯದಂತೆ ಜೈಲಿನ ಸರಳುಗಳನ್ನು ಕತ್ತರಿಸಿ ಹಗ್ಗವನ್ನು ಬಳಸಿಕೊಂಡು ಜೈಲಿನ ಗೋಡೆಗಳನ್ನು ಏರಿ ಪರಾರಿಯಾಗಿದ್ದಾರೆ.
ಪರಾರಿಯಾದ ಕೈದಿಗಳು ನರ್‌ಸಿಂಗ್‌ (20), ದುಬೆಲಾಲ್‌ (19), ಪಂಕಜ್‌(20), ಲೇಖ್‌ ರಾಮ್‌ (29) ಎನ್ನುವವರಾಗಿದ್ದಾರೆ.
ನಾಲ್ವರ ಪೈಕಿ ಓರ್ವ ಕೊಲೆಕೇಸ್‌ನಲ್ಲಿ ಶಿಕ್ಷೆಗೊಳಗಾಗಿದ್ದು,ಇನ್ನೋರ್ವ ರೇಪ್‌ ಕೇಸ್‌ನಲ್ಲಿ ಶಿಕ್ಷೆಗೊಳಗಾದವನು, ಇನ್ನಿಬ್ಬರು ಡ್ರಗ್ಸ್‌ ಜಾಲದಲ್ಲಿ ಸಿಕ್ಕಿ ಬಿದ್ದವರು.
ಘಟನೆ ನಡೆದ ಬೆನ್ನಲ್ಲೆ ಮೂವರು ಪೊಲೀಸ್‌ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಲಾಗಿದೆ.
ಪರಾರಿಯಾದ ಕೈದಿಗಳ ಸುಳಿವು ನೀಡಿದವರಿಗೆ ತಲಾ 50 ಸಾವಿರ ಬಹುಮಾನವನ್ನು ಸರ್ಕಾರ ಘೋಷಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT