ಕೋಡಿಯೇರಿ ಬಾಲಕೃಷ್ಣನ್ 
ದೇಶ

ಯಾವುದೇ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳಲ್ಲ: ಸಿಪಿಎಂ ಮುಖಂಡ ಕೊಡಿಯೇರಿ ಬಾಲಕೃಷ್ಣನ್

ಅತ್ಯಾಚಾರ ಆರೋಪ ಹೊಂದಿರುವ ಮಗನನ್ನು ರಕ್ಷಿಸಲು ನಾನು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ, ಎಂದು ಕೇರಳ ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ...

ತಿರುವನಂತಪುರ: ಅತ್ಯಾಚಾರ ಆರೋಪ ಹೊಂದಿರುವ ಮಗನನ್ನು ರಕ್ಷಿಸಲು ನಾನು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ, ಎಂದು ಕೇರಳ ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಹೇಳಿದ್ದಾರೆ. 
ಹಿರಿಯ ಮಗನಾದ ಬಿನೊಯ್ ಕೊಡಿಯೇರಿ ವಿರುದ್ಧ 33 ವರ್ಷದ ಮಹಿಳೆ ದೂರು ದಾಖಲಿಸಿರುವ ಪ್ರಕರಣದ ಸಂಬಂಧ ಪ್ರತಿಕ್ರಿಯಿಸಿರುವ ಅವರು, ನನ್ನ ಪಕ್ಷ (ಸಿಪಿಐ-ಎಂ) ಅಥವಾ ನಾನು ಬಿನೊಯ್ ಕೊಡಿಯೇರಿಯನ್ನು ರಕ್ಷಿಸುವುದಿಲ್ಲ. ಅವನು ವಯಸ್ಕ. ಅವನು ಸ್ವತಂತ್ರವಾಗಿ ಬದುಕುತ್ತಾನೆ ಮತ್ತು ತಾನು ಮಾಡಿರುವ ಕಾರ್ಯಗಳಿಗೆ ಜವಾಬ್ದಾರನಾಗಿರುತ್ತಾನೆ ಎಂದು ಖಡಕ್ ಆಗಿ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಅತ್ಯಾಚಾರ ವಿಚಾರವಾಗಿ ವಿವಾದ ಭುಗಿಲೆದ್ದ ನಂತರ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಕೊಡಿಯೇರಿ ಬಾಲಕೃಷ್ಣನ್ ಪ್ರತಿಕ್ರಿಯೆ ನೀಡಿದ್ದಾರೆ.ಮುಂಬೈನ ಮಾಜಿ ಬಾರ್ ನರ್ತಕಿ ಮದುವೆಯಾಗುವುದಾಗಿ ಭರವಸೆ ನೀಡಿದ್ದ ಬಿನೊಯ್ ಕೊಡಿಯೇರಿ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.  ಅಲ್ಲದೆ ಇಬ್ಬರಿಗೆ 8 ವರ್ಷದ ಮಗನಿದ್ದಾನೆ ಎಂದು ಹೇಳಿಕೊಂಡಿದ್ದಾಳೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT